ಮೈಸೂರು: ಮೈಸೂರು ಜಿಲ್ಲೆಯ ದಾಸನಕೊಪ್ಪಲು ಗ್ರಾಮದಲ್ಲಿ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಗಾಗಿ ಓದುತ್ತಿದ್ದ ಯುವತಿಯೊಬ್ಬಳು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
23 ವರ್ಷದ ಚಂದನ ಮೃತ ಯುವತಿ. ಚಂದನ ತಂದೆ ಕೆ ಎಸ್ ಆರ್ ಟಿ ಸಿ ನೌಕರ ಹಾಗೂ ತಾಯಿ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.
ಎಂ.ಕಾಂ ಮುಗಿಸಿದ್ದ ಚಂದನ ಸಿಎ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಆದರೆ ಇದೀಗ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದನ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.