News Karnataka Kannada
Monday, April 29 2024
ಮೈಸೂರು

ಚಿಲ್ಲದಹಳ್ಳಿಯಲ್ಲಿ ಕಬ್ಬಿನ ಗದ್ದೆ ಬೆಂಕಿಗಾಹುತಿ

Fire On Field
Photo Credit :

ಕೆ.ಆರ್.ಪೇಟೆ: ಕಬ್ಬಿನಗದ್ದೆಯಲ್ಲಿ ವಿದ್ಯುತ್ ಪರಿವರ್ತಕವನ್ನು ಅಳವಡಿಸಿರುವ ಪರಿಣಾಮ ಕಬ್ಬಿನ ಸೂಲಂಗಿಗಳಿಗೆ ವಿದ್ಯುತ್ ತಂತಿಗಳ ಸ್ಪಶರ್ವಾಗಿ ಸುಮಾರು ಅರ್ಧ ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ಚಿಲ್ಲದಹಳ್ಳಿ  ಗ್ರಾಮದಲ್ಲಿ ನಡೆದಿದೆ.

ಚಿಲ್ಲದಹಳ್ಳಿ  ಗ್ರಾಮದ ನಿವಾಸಿ ಈರಯ್ಯ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಈ ಹಿಂದೆಯೇ ಟಿಸಿಯನ್ನು ಅಳವಡಿಸಲಾಗಿತ್ತು. ಈರಯ್ಯ ಟಿಸಿ ಇರುವ ಸ್ಥಳದ ಸುತ್ತಲೂ ಸ್ವಲ್ಪ ಜಾಗ ಬಿಟ್ಟು ಕಬ್ಬಿನ ನಾಟಿ ಮಾಡಿದ್ದರು. ಕಬ್ಬು ಕಟಾವು ಮಾಡಬೇಕಾಗಿರುವ ಸಮಯದಲ್ಲಿ ವಿದ್ಯುತ್ ತಂತಿಗಳಿಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಮಾಲೀಕ ಈರಯ್ಯ ಹಾಗೂ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಠಾಣಾಧಿಕಾರಿ ಶಿವಣ್ಣ, ಸೋಮಶೇಖರ್, ಶ್ರೀಕಾಂತ್, ಚಂದನ್‌ಕುಮಾರ್ ನೇತೃತ್ವದ  ತಂಡ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೂ ಸುಮಾರು ಅರ್ಧ ಎಕರೆಯಷ್ಟು ಕಬ್ಬು ಸಂಪೂರ್ಣವಾಗಿ ಸುಟ್ಟುಹೋಗಿದ್ದು ಬಡ ರೈತ ಈರಯ್ಯ ಟಿಸಿಯನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಹಾಗೂ ತನಗಾಗಿರುವ ನಷ್ಟವನ್ನು ತುಂಬಿಕೊಡುವಂತೆ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು