ಮೈಸೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಸೇಪರ್ಡೆಯಾಗಬೇಕೆ ವಿನಃ ಷರತ್ತು ವಿಧಿಸಿ ಬರುವುದಲ್ಲ. ಈ ಹಿಂದೆ ಸಿದ್ದರಾಮಯ್ಯ ಕೂಡ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಸೇರಿ, ಪಕ್ಷ ಸಂಘಟಿಸಿ ಮುಖ್ಯಮಂತ್ರಿಯಾದರು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಪರೋಕ್ಷವಾಗಿ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಟಾಂಗ್ ನೀಡಿದರು.
ನಗರದ ಕೆ.ಆರ್.ಮಿಲ್ ಕಾಲೋನಿಯ ಬಳಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಬೆಲವತ್ತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಆಕಾಂಕ್ಷಿಗಳ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಷರತ್ತಿಲ್ಲದೆ ಮುಖಂಡರಾಗಿ ಬಂದು ಈ ರಾಜ್ಯದ ಮುಖ್ಯಮಂತ್ರಿಯಾದರು. ಅದೇ ರೀತಿ ಕಾಂಗ್ರೆಸ್ ಪಕ್ಷಕ್ಕೆ ಬರುವವರು ಯಾವುದೇ ಷರತ್ತಿಲ್ಲದೆ ಪಕ್ಷದ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ತಿಳಿ ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದ್ದು ಕಾಂಗ್ರೆಸ್ನಲ್ಲಿ ಪಕ್ಷದ ಸಿದ್ಧಾಂತ ಮುಖ್ಯವೇ ಹೊರತು ಯಾವುದೆ ವ್ಯಕ್ತಿ ಮುಖ್ಯಅಲ್ಲ. ಆದ್ದರಿಂದ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಆದ್ಯತೆ ನೀಡಬೇಕು. ಎಂತಹ ಸಂದರ್ಭ ಬಂದರೂ ಪಕ್ಷ ನಿಮ್ಮೊಂದಿಗೆ ಇರಲಿದೆ. ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿರುವ ಕಾಂಗ್ರೆಸ್ಗೆ ೧೩೫ ವರ್ಷಗಳ ಇತಿಹಾಸವಿದೆ ಎಂದರು.
ಜಿಟಿಡಿ ಕಾಂಗ್ರೆಸ್ ಸೇರ್ಪಡೆ ಷರತ್ತಿಗೆ ಮರೀಗೌಡ ತಿರುಗೇಟು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.