News Karnataka Kannada
Monday, April 29 2024
ಮೈಸೂರು

ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡಲು ಅಭ್ಯಂತರ ಇಲ್ಲ: ಯದುವೀರ್

Yaduveer
Photo Credit : News Kannada

ಮೈಸೂರು : ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ. ಸರ್ಕಾರದ ಇಚ್ಛೆ ಇದ್ದರೆ ನಾಮಕರಣ ಮಾಡಬಹುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಖಾಸಗಿಯಾಗಿ ರೈಲ್ವೆ ಹಳಿ ತರಬೇಕು ಎನ್ನುವುದರ ಬಗ್ಗೆ 10ನೇ ಚಾಮರಾಜ ಒಡೆಯರ್ ಆಸಕ್ತಿ ವಹಿಸಿ ರೈಲ್ವೆ ಯೋಜನೆ ರೂಪಿಸಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲೂ ರೈಲ್ವೆಗಾಗಿ ಕೆಲಸ ನಡೆದಿತ್ತು. ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಯೋಜನೆಗೆ ಒಡೆಯರ್ ಅವರು ನೀಡಿದ್ದ ಕೊಡುಗೆಗಳನ್ನು ಹೇಳಿದ್ದಾರೆ. ಅದನ್ನು ಮತ್ತೆ ನಾನು ಹೇಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸರ್ಕಾರ ನಾಮಕರಣ ಮಾಡಿದರೆ ಒಳ್ಳೆಯದು. ಆದರೆ, ಈ ವಿಚಾರ ಬೇರೆ ಕಡೆಗೆ ತಲುಪಬಾರದು. ಯಾವುದಾದರೂ ಒಂದು ರೈಲು ಅಥವಾ ನಿಲ್ದಾಣಕ್ಕೆ ಒಡೆಯರ್ ಹೆಸರು ನಾಮಕರಣ ಮಾಡುವ ಬಗ್ಗೆ ನನ್ನದೇನೂ ಇಲ್ಲ. ಸರ್ಕಾರದ ತೀರ್ಮಾನ ಮತ್ತು ಇಚ್ಛೆ ಆಗಿರಬೇಕು. ಅದಕ್ಕೆ ಜನರ ಬೆಂಬಲವೂ ಇರಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು