ಮೈಸೂರು: ಜಿಲ್ಲೆಯ ಸಂಚಾರಿ ಠಾಣೆಯೊಂದರಲ್ಲಿ ಎಎಸ್ಐ ಆಗಿ ಕೆಲಸ ನಿರ್ವಹಿಸುತ್ತಿದ್ದಂತವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.ಮೈಸೂರಿನ ವಿವಿ ಪುರಂ ಸಂಟಾರಿ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯವನ್ನು ಶಿವಕುಮಾರಸ್ವಾಮಿ(54) ನಿರ್ವಹಿಸುತ್ತಿದ್ದರು.ಅವರು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿವಕುಮಾರಸ್ವಾಮಿಯವರು ನಗರದ ಗೌರಿ ಶಂಕರ ನಗರದಲ್ಲಿ ಮನೆಯಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆ ಆರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.