News Karnataka Kannada
Monday, May 06 2024
ಮೈಸೂರು

ದಸರಾ ಮಹೋತ್ಸವ: ಸಾಂಸ್ಕೃತಿಕ ನಗರಿಯತ್ತ ಗಜಪಯಣ

13mys Dasara 13092021
Photo Credit :

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿದವು.

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸೋಮವಾರ ಆಯೋಜಿಸಿದ್ದ ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಿತು.

ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಂಟು ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಸಿಂಗರಿಸಲಾಗಿತ್ತು. ಅಭಿಮನ್ಯು ಜೊತೆಗೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋ‍ಪಾಲಸ್ವಾಮಿ ಆನೆಗಳು ಈ ಬಾರಿ ಭಾಗಿಯಾಗಲಿವೆ.

ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಎಸ್ ಪಿ ಆರ್.ಚೇತನ್, ಮೇಯರ್ ಸುನಂದಾ ಫಾಲನೇತ್ರ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು