ಮೈಸೂರು: ಲಯನ್ಸ್ ಕ್ಲಬ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಸಹಾಯಕ ಆಯುಕ್ತರೊಬ್ಬರಿಗೆ ಕ್ಲಬ್ನ ಉಪಾಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯಿಸಿ ಕ್ಲಬ್ನ ಅಧ್ಯಕ್ಷ ಹಾಗೂ ಇನ್ನಿತರರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಣ ಬೆದರಿಕೆ ಒಡ್ಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ನಗರದ ಸಿಸಿಬಿಯಲ್ಲಿ ಪೊಲೀಸ್ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಶಶಿಕುಮಾರ್ ಅವರಿಗೆ ದೇವೇಗೌಡ, ಕ್ಲಬ್ನ ಅಧ್ಯಕ್ಷ ಎಂ.ಮೋಹನ್, ಖಜಾಂಚಿ ಶಿವಣ್ಣ, ಲೋಕೇಶ್, ಮೋಹನ್ಕುಮಾರ್, ರಮೇಶ್ ಎಂಬವರು ಕೊಲೆ ಬೆದರಿಕೆ ಹಾಕಿರುವ ಸಂಬಂಧ ದೂರು ದಾಖಲಾಗಿದೆ.
ಶಶಿಕುಮಾರ್ ಅವರು ಸೇವೆಯಿಂದ ನಿವೃತ್ತರಾದ ನಂತರ ತಿಲಕ್ನಗರದಲ್ಲಿರುವ ಲಯನ್ಸ್ ಕ್ಲಬ್ ಆಫ್ ಮೈಸೂರು ಸಂಸ್ಥೆಗೆ ಸದಸ್ಯರಾಗಿದ್ದರು. ನಂತರ ಅವರು ಕ್ಲಬ್ನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರ ಸೆವೆಯನ್ನು ಪರಿಗಣಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಂಬಂಧ ಮಾತುಕತೆ ನಡೆದಿತ್ತು. ಅದರಂತೆ ಮಾತುಕತೆಗೆಂದು ನಾನು ಮತ್ತು ಸಿದ್ದರಾಜು ಅವರು ವಿಜಯನಗರದ ದೇವೇಗೌಡ ಅವರ ನಿವಾಸಕ್ಕೆ ತೆರಳಿದ್ದೆವು. ಈ ವೇಳೆ ಅಧ್ಯಕ್ಷ ಸ್ಥಾನವನ್ನು ನಿಮಗೆ ಏಕೆ ಬಿಟ್ಟುಕೊಡಬೇಕು ಎಂದು ದೇವೇಗೌಡ ಹಾಗೂ ಉಳಿದವರು ಮಾತಿನ ಚಕಮಕಿ ಆರಂಭಿಸಿದರು. ನಂತರ ಎಲ್ಲರೂ ಸೇರಿ ನನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದರು ಎಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಇದೇ ವೇಳೆ ಆರೋಪಿಗಳು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆದರೆ, ಇದುವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಶಶಿಕುಮಾರ್ ಆರೋಪಿಸಿದ್ದಾರೆ.
ನಿವೃತ್ತ ಎಸಿಪಿಗೆ ಕೊಲೆ ಬೆದರಿಕೆ ; ಕ್ರಮ ಕೈಗೊಳ್ಳದ ಪೋಲೀಸ್ ?
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.