News Karnataka Kannada
Monday, April 29 2024
ಮೈಸೂರು

ಪಠ್ಯದ ವಿಷಯದಲ್ಲಿ ಲೆಫ್ಟು, ರೈಟು ಬೇಡ: ಯದುವೀರ್

Yaduveer
Photo Credit : News Kannada

ಮೈಸೂರು: ಪಠ್ಯದ ವಿಷಯದಲ್ಲಿ ಲೆಫ್ಟು, ರೈಟು ಎರಡು ಬೇಡ. ಮಕ್ಕಳಿಗೆ ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸುದ್ದಿಗಾರರೊಂದೊದಿಗೆ ಮಾತನಾಡಿ ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸಾಕಷ್ಟು ಚರ್ಚೆಯಾಗುತ್ತಿದ್ದು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದರು.

ಇದೇ ವೇಳೆ ನಗರದ ಸರ್ಕಾರಿ ಆಯುರ್ವೇದ ಕಾಲೇಜಿಗೆ ಭೇಟಿ ನೀಡಿ, ಕಾಲೇಜು ಕಟ್ಟಡದ ನವೀಕರಣದ ಬಗ್ಗೆ ಪರಿಶೀಲನೆ ನಡೆಸಿದ ಮಾತನಾಡಿ, 1930ರಲ್ಲಿ ಮೈಸೂರು ಮಹಾರಾಜರು ಸದರಿ ಕಟ್ಟಡವನ್ನು ನಿರ್ಮಿಸಿದ್ದು, ಸದಸ್ಯ 158 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡದ ನವೀಕರಣ ನಡೆಯುತ್ತಿದೆ. ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು. ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಎಂದು ಹೇಳಲಾಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅನುಮತಿ ನೀಡುತ್ತಿಲ್ಲ. ಆಯುರ್ವೇದಿಕ್ ಆಸ್ಪತ್ರೆ ಕಟ್ಟಡ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾರಕವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು