News Karnataka Kannada
Monday, May 06 2024
ಮೈಸೂರು

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡುವ ಪ್ರಶ್ನೆ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

S T Somshekar
Photo Credit :

ಮೈಸೂರು: ಈಗ ಬಿಜೆಪಿ ಸರ್ಕಾರದಲ್ಲಿ ನಿಷ್ಟೆಯಿಂದ ಕೆಲಸ ಮಾಡುತ್ತಿದ್ದೇನೆ. ಬಿಜೆಪಿ ಯಲ್ಲಿದಿದ್ದುಕೊಂಡು ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡುವ ಪ್ರಶ್ನೆ ಇಲ್ಲ. ಅಂತ ಹೇಯ ಕೆಲಸವನ್ನೂ ನಾನು ಯಾವತ್ತೂ ಮಾಡಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ತನ್ನ ಆಪ್ತರಾಗಿದ್ಧ ದಿನೇಶ್ ಗೂಳಿಗೌಡ ಮಂಡ್ಯದಿoದ ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಕ್ಕೆ ಮಂಗಳವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಾನು ಅಲ್ಲಿದಿದ್ದುಕೊಂಡು ಇಲ್ಲಿಗೆ, ಇಲ್ಲಿದ್ದುಕೊಂಡು ಅಲ್ಲಿಗೆ ಅನುಕೂಲ ಮಾಡಿಕೊಡುವ ಪ್ರಶ್ನೆ ಇಲ್ಲ. ನಾನು ಆ ಹಲ್ಕಟ್ ರಾಜಕಾರಣ ಮಾಡಲ್ಲ ಎಂದರು.

ಈ ಹಿಂದೆ ಕಾಂಗ್ರೆಸ್ ನಲ್ಲಿ ಇದ್ದೆ. ಆಗ ಆ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ದಿನೇಶ್ ಗೂಳಿಗೌಡ ನನ್ನ ಜೊತೆ ಇದ್ದ. ಎಂಟು ದಿನಗಳ ಹಿಂದೆ ನನ್ನ ಬಳಿ ಬಂದು, ಕಾಂಗ್ರೆಸ್‌ನಿoದ ಸ್ಪರ್ಧಿಸಲು ಟಿಕೆಟ್‌ಗೆ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದ. ನಾನು ಏನು ಮಾತನಾಡಲಿಲ್ಲ. ಮರುದಿನವೇ ವಿಶೇಷ ಕರ್ತವ್ಯಧಿಕಾರಿ ಹುದ್ದೆಯಿಂದ ತೆಗದುಹಾಕಿದ್ದೇನೆ. ನನಗೂ ಅವರಿಗೂ ಯಾವುದೇ ಸಂಬoಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ 3 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹೊಸಬರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್. ರಘು ಕೌಟಿಲ್ಯ ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿoದ ಸೋತ ಬಳಿಕವೂ, ಎಲ್ಲ ಗ್ರಾಮ ಪಂಚಾಯತಿ ಸದಸ್ಯರ ಜೊತೆ ಸಂಪರ್ಕದಲ್ಲಿದ್ದಾರೆ. ಆರ್.ರಘು ಅವರ ಗೆಲುವಿಗಾಗಿ ಈಗಾಗಲೇ ರಣತಂತ್ರ ಮಾಡಿದ್ದೇವೆ. ಕಾಂಗ್ರೆಸ್ ಜೆಡಿಎಸ್ ನವರು ಏನು ಬೇಕಾದರೂ ಮಾಡಲಿ. ಈ ಬಾರಿ ನೂರಕ್ಕೆ ನೂರರಷ್ಟು ಆರ್.ರಘು ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷ ಗ್ರಾ.ಪಂ. ಸದಸ್ಯರ ಅಧಿಕಾರ ಮೊಟಕು ಮಾಡಿಲ್ಲ. ಎಲ್ಲ ಸಮುದಾಯದವರಿಗೂ ಅಧಿಕಾರ ಸಿಗಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯತಿ ಸದಸ್ಯರ ಅಧ್ಯಕ್ಷ ಸ್ಥಾನದ ಅವಧಿಯನ್ನು ಎರಡುವರೆ ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು