News Karnataka Kannada
Monday, April 29 2024
ಮೈಸೂರು

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿ, ಅದನ್ನು ಅನುಸರಿಸಿದರೆ ನೆಮ್ಮದಿ ಹಾಳಾಗುತ್ತದೆ: ಪ್ರಲ್ಹಾದ್‌ ಜೋಶಿ

Attack on BSY's house may also be politically motivated: Prahlad Joshi
Photo Credit :

ಮೈಸೂರು: ಯುವ ಸಮೂಹ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿ, ಅದನ್ನು ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.

ಸೋಮವಾರ ಸಚ್ಚಿದಾನಂದಸ್ವಾಮಿಯವರ 80ನೇ ಜನ್ಮದಿನೋತ್ಸವದ ಪ್ರಯುಕ್ತ ನಡೆದ ಚೈತನ್ಯಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಗೆ ಶುಭ ಕಾಮನೆ ಸಲ್ಲಿಸಿ ಮಾತನಾಡಿದ ಅವರು, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಇಂದಿನ ಕ್ಷೋಭೆಯ ದಿನಮಾನದಲ್ಲೂ ನಾವೆಲ್ಲ ನೆಮ್ಮದಿ, ಶಾಂತಿಯಿಂದ ಇದ್ದೇವೆ. ಇದಕ್ಕೆ ನಮ್ಮಲ್ಲಿರುವ ಧಾರ್ಮಿಕ ಸಂಸ್ಕೃತಿಯೇ ಕಾರಣ ಎಂದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಯವರು ಹನುಮಾನ್ ಚಾಲೀಸ ಹಾಗೂ ದತ್ತನ ಆರಾಧನೆಯಿಂದ ಜನರಿಗೆ ಮಾನಸಿಕ ನೆಮ್ಮದಿ ಸಿಗುವಂತೆ ಮಾಡಿದ್ದಾರೆ. ಲಕ್ಷಾಂತರ ಜನರು ಶ್ರೀಗಳನ್ನು ಅನುಸರಿಸುತ್ತಿದ್ದಾರೆ. ಶ್ರೀಗಳು ಸಾವಿರಾರು ಗಿಡಮರಗಳನ್ನು ಬೆಳೆಸಿದ್ದಾರೆ. ಇದರ ಜತೆಗೆ ನೂರಾರು ಗಿಳಿಗಳನ್ನು ಸಂರಕ್ಷಿಸುತ್ತಾ ಒಂದು ರೀತಿ ಪರಿಸರ ಸಮತೋಲನ ಕಾಪಾಡುತ್ತಿದ್ದಾರೆ ಎಂದು ಬಣ್ಣಿಸಿದರು.

ಸಂಸದ ಪ್ರತಾಪ್ ಸಿಂಹ ಶ್ರೀಗಳಿಗೆ ಶುಭಾಶಯ ಸಲ್ಲಿಸಿ, ಕೊರೋನಾ ಸಂಕಷ್ಟದ ದಿನಗಳಲ್ಲಿ ಶ್ರೀಗಣಪತಿ ಸಚ್ಚಿದಾನಂದ ಸ್ವಾಮಿಯವರು ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ ಮಾಡಿಕೊಟ್ಟು, ನಮಗೆ ಬಹಳವಾಗಿ ನೆರವಾದರು ಎಂದು ಸ್ಮರಿಸಿದರು.

ಜೂನ್ 21 ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬರಲು ಒಪ್ಪಿಗೆ ನೀಡುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಪ್ರಮುಖ ಕಾರಣ ಎಂದು ನುಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು