News Karnataka Kannada
Monday, April 29 2024
ಮೈಸೂರು

ಪಿರಿಯಾಪಟ್ಟಣದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ

Piriyapatna
Photo Credit : News Kannada

ಮೈಸೂರು: ನಾಗರಿಕರಿಗೆ ಒಂದು ವಾರಗಳ ಬಂದೂಕು ತರಬೇತಿ ಕಾರ್ಯಾಗಾರ ಪಿರಿಯಾಪಟ್ಟಣದ ಪೊಲೀಸ್ ಮೈದಾನದಲ್ಲಿ ಆರಂಭಗೊಂಡಿದ್ದು ಸುಮಾರು ಎಂಬತ್ತಕ್ಕೂ ಹೆಚ್ಚಿನ ಬಂದಿ ಬಂದೂಕು ಬಳಕೆ ಕುರಿತಂತೆ ತರಬೇತಿ ಪಡೆಯುತ್ತಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆಗೆ ಆರಂಭಗೊಂಡಿರುವ ನಾಗರಿಕ ಬಂದೂಕು ತರಬೇತಿ ಕಾರ್ಯಾಗಾರ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ನಡೆಯುತ್ತಿದ್ದು, ತರಬೇತಿಗಾಗಿ ತಾಲ್ಲೂಕಿನ 80 ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ತರಬೇತಿ ಪ್ರತಿನಿತ್ಯ ಬೆಳಿಗ್ಗೆ 6.45 ರಿಂದ 8.45 ರವರೆಗೆ ತರಬೇತಿ ನಡೆಯಲಿದೆ.

ಬಂದೂಕು ತರಬೇತಿಯು ಬೈಲುಕುಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್ ರ ಉಸ್ತುವಾರಿಯಲ್ಲಿ ನಡೆಯುತ್ತಿದ್ದು, ಎಎಸ್ಐ ರಾಜ್ ಕುಮಾರ್ ಹಾಗೂ ಸಿಬ್ಬಂದಿ ತರಬೇತಿಯನ್ನು ನೀಡುತ್ತಿದ್ದಾರೆ. ಈ ತರಬೇತಿಗೆ ನಾಗರಿಕರು ಶ್ವೇತವಸ್ತ್ರ ಧರಿಸಿ ಆಗಮಿಸುತ್ತಿದ್ದು ನೋಡುಗರ ಗಮನಸೆಳೆಯುತ್ತಿದ್ದು, ನಾಗರಿಕರು ಕೂಡ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ.

ಪೊಲೀಸ್ ಇಲಾಖೆ ಕಳೆದ ಕೆಲವು ವರ್ಷಗಳಿಂದ ಬಂದೂಕು ತರಬೇತಿಯನ್ನು ನೀಡುತ್ತಿದ್ದು, ಈಗಾಗಲೇ ಹಲವು ಕಡೆಗಳಲ್ಲಿ ತರಬೇತಿ ನೀಡಲಾಗಿದೆ. ಬಂದೂಕು ಬಳಕೆ ಕುರಿತಂತೆ ಸಮಗ್ರ ಮಾಹಿತಿಯನ್ನು ನೀಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು