News Karnataka Kannada
Monday, April 29 2024
ಮೈಸೂರು

ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ: ಪ್ರಮೀಳಾ ಭರತ್  

Swach Bharath
Photo Credit : News Kannada

ಮೈಸೂರು: ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಪ್ರಮುಖ ಆದ್ಯತೆಯನ್ನು ನೀಡಬೇಕಾಗಿದ್ದು, ಪ್ರತಿಯೊಬ್ಬರೂ ಸ್ವಚ್ಛತೆ ಕೈಗೊಳ್ಳಲು ಸಹಕಾರ ನೀಡುವಂತೆ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್  ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರದ 23ನೇ ವಾರ್ಡಿನಲ್ಲಿ ಕಸ ವಿಲೇವಾರಿ ಮಾಡುವ ಆಟೋಗಳ ಸಮಸ್ಯೆ ಬಗ್ಗೆ ಸಂಬಂಧಪಟ್ಟ  ಅಧಿಕಾರಿಗಳ ಜೊತೆ ಸಮಾಲೋಚಿಸಿ ಸಮಸ್ಯೆಯನ್ನು ಬಗೆಹರಿಸಿ ಮಾತನಾಡಿದ ಅವರು, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಮನಸ್ಸು ಬದಲಾಗಬೇಕಿದೆ. ಶುದ್ಧವಾದ ಗಾಳಿ, ನೀರು, ದೈನಂದಿನ ಆಹಾರ ದೊರಕಬೇಕಾದರೆ ಪ್ರತಿಯೊಬ್ಬರೂ ಪರಿಸರವನ್ನು ಸಂರಕ್ಷಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ತಮ್ಮ ಮನೆಯ ಸ್ವಚ್ಛತೆಯನ್ನು ಕಾಪಾಡಿಕೊಂಡು ಇನ್ನೊಬ್ಬರಿಗೆ ತೊಂದರೆ ಮಾಡಬಾರದು. ಮನೆಯ ಕಸ ಪ್ಲಾಸ್ಟಿಕ್ ಇತರ ತ್ಯಾಜ್ಯಗಳನ್ನು ರಸ್ತೆ ಬದಿ, ಸಾರ್ವಜನಿಕ ಸ್ಥಳದಲ್ಲಿ ಹಾಕುವುದು ಸರಿಯಲ್ಲ. ಪರಿಸರ ಸಂರಕ್ಷಣೆ ಒತ್ತು ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಅಧಿಕಾರಿ ಮೃತ್ಯುಂಜಯ  ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಮತ್ತು  ಪೌರ ಕಾರ್ಮಿಕರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು