News Karnataka Kannada
Tuesday, May 07 2024
ಮೈಸೂರು

ಬಿಜೆಪಿ ಅಭ್ಯರ್ಥಿ ಆರ್.ರಘು ಕೌಟಿಲ್ಯರನ್ನು ಗೆಲ್ಲಿಸಿ : ಶಾಸಕ ರಾಮದಾಸ್

Ramdas
Photo Credit :

ಮೈಸೂರು: ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿoದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಚುನಾಯಿತ ಜನಪ್ರತಿನಿಧಿಗಳ ಮನವೊಲೈಸಿ, ಬಿಜೆಪಿ ಅಭ್ಯರ್ಥಿಯಾದ ಆರ್.ರಘುಕೌಟಿಲ್ಯರನ್ನು ಗೆಲ್ಲಿಸಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಮಂಗಳವಾರ ಮೈಸೂರು ಜಿಲ್ಲೆಯ ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ತಲಕಾಡು, ಕಲಿಯೂರು, ದೊಡ್ಡಾಪುರ, ಹೊಳೆಸಾಲು, ಬಿ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತ್‌ನ ಸದಸ್ಯರುಗಳು ಹಾಗೂ ಬಿಜೆಪಿ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಹಳ ಜನ ವಿದ್ಯಾವಂತರು,ಪದವೀಧರರು ಪಂಚಾಯತ್ ಸದಸ್ಯರಾಗಿರುವುದು ವಿಶೇಷ. ಕೇಂದ್ರ ಸರ್ಕಾರದ ಯೋಜನೆಗಳನ್ನು ಅರಿವು ಮಾಡಿಕೊಟ್ಟು, ಜನ ಸಾಮಾನ್ಯರಿಗೆ ಮುಟ್ಟುವತ್ತ ನಾವೆಲ್ಲರೂ ಕೆಲಸ ನಿರ್ವಹಿಸಬೇಕಿದೆ. ಪಂಚಾಯತ್ ಮಟ್ಟದಲ್ಲಿ ಅಭಿವೃದ್ಧಿ ಮಾಡಿದರೆ, ಸರ್ಕಾರ ಕಟ್ಟ ಕಡೆಯ ವ್ಯಕ್ತಿಗೂ ತಲುಪುತ್ತದೆ. ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸೋಣ ಎಂದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಆರ್.ರಘು ಕೌಟಿಲ್ಯರನ್ನು ಗೆಲ್ಲಿಸುವಲ್ಲಿ ಶ್ರಮ ವಹಿಸೋಣ. ಪಂಚಾಯತಿ ಸದಸ್ಯರಿಗೆ ಚುನಾವಣೆ ಮಹತ್ವ ಹಾಗೂ ಹಾಗೂ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿ ಮಾಡಿ, ಮನವೊಲಿಸುವ ಎರಡೂ ಕಾರ್ಯ ಕೂಡಾ ಇವತ್ತಿಂದ ಪ್ರಾರಂಭವಾಗಬೇಕು ಹಾಗೂ ಮೊದಲ  ಮತವನ್ನು ಬಿಜೆಪಿ ಅಭ್ಯರ್ಥಿಗೆ ನೀಡಬೇಕು ಎಂದು ತಿಳಿದರು.

ಸಭೆಯಲ್ಲಿ ತಿ ನರಸೀಪುರ ಬಿಜೆಪಿ ಅಧ್ಯಕ್ಷ ಲೋಕೇಶ್, ಮಾಜಿ ವಿಧಾನಪರಿಷತ್ ಸದಸ್ಯ ಸಿ ರಮೇಶ್, ಮಾಜಿ ಶಾಸಕ ಭಾರತೀ ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್, ಸಿದ್ಧಮಲ್ಲಪ್ಪ, ಮರಿಸ್ವಾಮಿ, ಕರವಟ್ಟಿ ಮಹಾದೇವಯ್ಯ ಮತ್ತಿತರರ ಪ್ರಮುಖರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು