ಮೈಸೂರು: ಗ್ರಾಪಂ ಸದಸ್ಯರಿಗೆ ಅನುಕೂಲ ಕಲ್ಪಿಸಲು ಡಿಲಿಮಿಟೇಷನ್ ಮಾಡಲಾಗಿದೆ. ಗ್ರಾಮ ಪಂಚಾಯತ್ ಗಳು ಬಲಗೊಂಡರೆ ಎಲ್ಲಾ ಕ್ಷೇತ್ರಗಳು ಬಲಗೊಂಡoತೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಆರ್. ರಘು ಕೌಟಿಲ್ಯ ಅವರನ್ನು ಗೆಲ್ಲಿಸಿ, ವಿಧಾನಪರಿಷತ್ ನಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸ್ಥಳೀಯ ಸಂಸ್ಥೆಗಳಿoದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆ ನಿಮಿತ್ತ ಸೋಮವಾರ ಮೈಸೂರು ನಗರ ಹಾಗೂ ಪಿರಿಯಾಪಟ್ಟಣ ಭಾಗದಲ್ಲಿ ಗ್ರಾಪಂ ಸದಸ್ಯರು, ಮುಖಂಡರ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಗ್ರಾಪಂ ಮಟ್ಟದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕೆoದರೆ ಸ್ಥಳೀಯರಿಗೆ ಸ್ಪಂದಿಸುವವರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ನಾವು ಈಗಾಗಲೇ 15 ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೇವೆ. ಆದರೆ ಕಾಂಗ್ರೆಸ್ ಅಳೆದುತೂಗಿ ಅಭ್ಯರ್ಥಿಯನ್ನು ಘೋಷಿಸಿದ್ದು, ಅವರು ಈಗ ಪ್ರಚಾರ ಆರಂಭಿಸಿದ್ದಾರೆ. ಚಾಮರಾಜನಗರ, ಮೈಸೂರು ಜಿಲ್ಲೆಯ 15 ಕ್ಷೇತ್ರದಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡುವಷ್ಟರಲ್ಲಿ ಚುನಾವಣೆಯೇ ಮುಗಿದುಹೋಗಿರುತ್ತದೆ. ಇನ್ನೂ ಜೆಡಿಎಸ್ ಬಗ್ಗೆ ಮಾತನಾಡುವುದೇ ಬೇಡ ಎಂದರು.
ವಿಧಾನಪರಿಷತ್ ಗೆ ಆಯ್ಕೆ ಆಗುವ ವ್ಯಕ್ತಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರೊoದಿಗೆ ಒಡನಾಟವಿರಬೇಕು. ಗ್ರಾಪಂ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸುವುದಷ್ಟೇ ಅಲ್ಲದೇ ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದು ಗೊತ್ತಿರಬೇಕು. ಆದರೆ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಗೆ ಇದ್ಯಾವುದು ಇಲ್ಲ. ಎಷ್ಟು ಗ್ರಾಮ ಪಂಚಾಯತ್ ಇದೆ, ಹೇಗೆ ಕೆಲಸ ಮಾಡಬೇಕು ಎಂಬುದು ಗೊತ್ತಿಲ್ಲ ಎಂದರು.
ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಶಾಸಕರ ನೇತೃತ್ವದಲ್ಲಿ ತಂಡಗಳಾಗಿ ಪ್ರಚಾರ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಡೆ ಬಿಜೆಪಿ ಕಡೆ ಒಲವು ವ್ಯಕ್ತವಾಗುತ್ತಿರುವುದರಿಂದ ಅನ್ಯ ಪಕ್ಷದವರು ದಾರಿ ತಪ್ಪಿಸಬಹುದು. ಆದರೆ ಯಾವುದಕ್ಕೂ ಕಿವಿಗೊಡಬೇಡಿ. ಮೊದಲ ಪ್ರಾಶಸ್ತ÷್ಯ ಮತವನ್ನು ಚಲಾಯಿಸಬೇಕು ಎಂದರು.
ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಅವರು ಗ್ರಾಪಂ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಯಾವುದೇ ಗ್ರಾಪಂ ಸದಸ್ಯರು ರಘು ಅವರನ್ನು ಯಾವಾಗ ಬೇಕಾದರೂ ಭೇಟಿ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದರು.
ಚುನಾವಣೆ ಪ್ರಚಾರ ಸಭೆಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ. ರಾಮದಾಸ್, ಎನ್. ಮಹೇಶ್, ಹರ್ಷವರ್ಧನ್, ಅಭ್ಯರ್ಥಿ ಆರ್.ರಘು ಕೌಟಿಲ್ಯ, ಮಾಜಿ ಸಚಿವ ವಿಜಯಶಂಕರ್ ಸೇರಿದಂತೆ ಬಿಜೆಪಿಯ ನಾನಾ ಮುಖಂಡರು ಭಾಗವಹಿಸಿದ್ದರು.