ಮೈಸೂರು: ಕುವೆಂಪುನಗರದ ನಿಮಿಷಾಂಭ ಬಡಾವಣೆಯ ವಿವೇಕಾನಂದ ವೃತ್ತಕ್ಕೆ ಸೇರುವ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರವಾಹನ ಹಾಗೂ ಕಾರ್ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನದ ಚಾಲಕ ತೀವ್ರತೆರನಾದ ಗಾಯವಾಗಿ ನರಳಾಡುತ್ತಿದ್ದ ಬಿದ್ದಿದ್ದನು.
ಕುವೆಂಪುನಗರದ ಮೆಗಾ ಮೆಡಿಕಲ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪಾದಯಾತ್ರೆ ಮುಗಿಸಿ ಅದೇ ರಸ್ತೆಯಲ್ಲಿ ವಾಪಾಸ್ಸಾಗುತ್ತಿದ್ದಾಗ ಅಪಘಾತವನ್ನು ಗಮನಿಸಿ ಕೂಡಲೇ ಧಾವಿಸಿದ ಎಂಕೆ ಸೋಮಶೇಖರ್ ರವರು ಗಾಯಾಳುವನ್ನು ಆಟೋ ಮೂಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದರು.
ಇನ್ನಾದರೂ ಪಾಲಿಕೆ ಜಿಲ್ಲಾಡಳಿತ ಕೂಡಲೇ ಗುಂಡಿಗಳನ್ನು ಮುಚ್ಚಿ ನಾಗರೀಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಆಗ್ರಹಿಸಿದರು.
ಕೆಆರ್ ಕ್ಷೇತ್ರ ಮಾದರಿ ಕ್ಷೇತ್ರ,ಸುರಕ್ಷತೆಯ ರಸ್ತೆಯುಳ್ಳ ಕ್ಷೇತ್ರ ಎಂದು ಬರೀ ಹೇಳಿಕೆ ,ಪ್ರಚಾರಕಷ್ಟೆ ಸೀಮಿತಗೊಳಿಸಿದ್ದಾರೆ. ಕೂಡಲೇ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಸರಿಪಡಿಸಿ ಅನಾಹುತಗಳು ಸಂಭವಿಸದAತೆ ಕಾರ್ಯೋನ್ಮುಖರಾಗಿ ಕೆಲಸ ಮಾಡಲಿ. ಹೇಳಿಕೆಗಳಿಗೆ ಅಭಿವೃದ್ಧಿ ಸೀಮಿತವಾಗದಿರಲಿ ಎಂದು ಕಿಡಿಕಾರಿದರು.
ಕಳೆದ ಹಲವಾರು ದಿನಗಳಿಂದಲೂ ನಾಗರೀಕರು, ಹಿರಿಯರು, , ಅಂಗವಿಕಲರು ಕೆಆರ್ ಕ್ಷೇತ್ರದ ಎಲ್ಲಾ ಬಡಾವಣೆಗಳ ರಸ್ತೆಗಳಲ್ಲಿ ಹದಗೆಟ್ಟ ರಸ್ತೆಗಳಿಂದಾಗಿ ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸಿದ್ದು, ಎರಡು ಮೂರು ಜನ ಗುಂಡಿಗಳಲ್ಲಿ ಬಿದ್ದು ಜೀವ ತೆತ್ತಿದ್ದಾರೆ.ಇನ್ನೂ ಕೆಲವರು ಕೈ ಕಾಲು ಮುರಿದುಕೊಂಡು ಸರ್ಕಾರಕ್ಕೆ ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ,ಜನಪ್ರತಿನಿಧಿಗಳಿಗೆ ಇಡೀ ಶಾಪ ಹಾಕುತ್ತಿದ್ದಾರೆ.
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…