ಮೈಸೂರು: ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಉಮೇಶ್ (30) ಪತ್ನಿ ಲತಾ (26) ಮೃತ ದುರ್ದೈವಿಗಳು.
4 ವರ್ಷದ ಹಿಂದೆ ಮದುವೆಯಾಗಿದ್ದ ಈ ದಂಪತಿಗೆ ಮಕ್ಕಳಿರಲಿಲ್ಲ. ಮದ್ಯವ್ಯಸನಿಯಾಗಿದ್ದ ಉಮೇಶ್ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಯಾವುದೋ ವಿಚಾರಕ್ಕೆ ಮನನೊಂದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.