ಪಾಂಡವಪುರ: ಚಲಿಸುತ್ತಿದ್ದ ಲಾರಿಯ ಟೈರ್ ಸಿಡಿದ ಪರಿಣಾಮ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿ ಬಿದ್ಧ ಘಟನೆ ತಾಲೂಕಿನ ಮಹದೇಶ್ವರಪುರ ಗ್ರಾಮದ ಬಳಿ ನಡೆದಿದೆ. ಅದೃಷ್ಟ ವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಗಮಂಗಲ ಕಡೆಯಿಂದ ಪಾಂಡವಪುರ ಮಾರ್ಗವಾಗಿ ತಮಿಳುನಾಡಿನ ಸತ್ಯಮಂಗಲಕ್ಕೆ ಹೂವು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈರ್ ಸಿಡಿದಿದ್ದು, ಚಾಲಕ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದಲ್ಲೇ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಗುಚಿ ಬಿದ್ದ ಲಾರಿ ವೇಗವಾಗಿ ಚಲಿಸಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.