ಪಿರಿಯಾಪಟ್ಟಣ: ಇಲ್ಲಿನ ಮನೆಯೊಂದರಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅಗ್ನಿ ಅನಾಹುತವನ್ನು ಅಗ್ನಿಶಾಮಕ ಸಿಬ್ಬಂದಿ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಿರಿಯಾಪಟ್ಟಣದ ಟ್ಯಾಂಕ್ ಬಡಾವಣೆಯ ನಿವಾಸಿ ಇರ್ಷಾದ್ ಬಾನು ಎಂಬುವರು ಮನೆಯ ಮಹಡಿಯ ಮೇಲೆ ಸಂಗ್ರಹಿಸಿದ್ದ ತೆಂಗಿನ ಕಾಯಿಮಟ್ಟೆಗೆ ಸ್ನಾನದಮನೆಯ ಹೊಗೆ ಪೈಪಿನಿಂದ ಬಂದ ಬೆಂಕಿ ತಗುಲಿದ್ದು ಅದು ಹೊತ್ತಿ ಉರಿಯುವ ಮೂಲಕ ಸಂಭವಿಸಬಹುದಾದ ಭಾರೀ ಅನಾಹುತವನ್ನು ಸಕಾಲದಲ್ಲಿ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತಪ್ಪಿಸಿದ್ದಾರೆ.
ಇರ್ಷಾದ್ ಬಾನು ತಮ್ಮ ಆರ್ ಸಿಸಿ ಮನೆಯ ಮೇಲೆ ತೆಂಗಿನ ಕಾಯಿ ಮಟ್ಟೆ ಸಂಗ್ರಹಿಸಿಟ್ಟಿದ್ದರು. ಸ್ನಾನದ ಮನೆಯಲ್ಲಿ ಬಿಸಿ ನೀರು ಕಾಯಿಸಲು ಹಾಕಿದ್ದ ಬೆಂಕಿಯ ಬಿಸಿಗೆ ಹೊಗೆಯ ಪೈಪ್ ಪಕ್ಕದಲ್ಲಿದ್ದ ಮಟ್ಟೆಗೆ ಬೆಂಕಿ ತಗುಲಿದೆ ಇದರಿಂದ ಸಂಗ್ರಹಿಸಿದ್ದ ಕಾಯಿ ಮಟ್ಟೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರು ಪಟ್ಟಣದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂಧ ಠಾಣಾಧಿಕಾರಿ ಅಜಯ್ ಕುಮಾರ್, ಸಿಬ್ಬಂದಿ ರಮೇಶ್, ಮಂಜುನಾಥ್, ಚಂದ್ರಶೇಖರ್ ಅವರು ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…