News Karnataka Kannada
Monday, April 29 2024
ಮೈಸೂರು

ಮನೆ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ

Rain
Photo Credit : News Kannada

ಮೈಸೂರು : ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆ ಮೈಸೂರು ಭಾಗದಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ್ದು, ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಚಹಳ್ಳಿಹುಂಡಿ ಗ್ರಾಮದಲ್ಲಿ ಮರವೊಂದು ಮನೆಯ ಮೇಲೆ ಬಿದ್ದಿದ್ದು ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಂಚಹಳ್ಳಿ ಹುಂಡಿ ಗ್ರಾಮದ ಕಾಂಗ್ರೆಸ್ ಮುಖಂಡ ಮನ್ನೇಗೌಡರ ನಿವೇಶನದಲ್ಲಿದ್ದ ಬಾರಿ ಗೊಬ್ಬಳಿ ಮರ ಮಳೆಗಾಳಿಗೆ ಸಮೀಪದ ಕೆಂಪಶೆಟ್ಟಿ ಎಂಬವರ ಮನೆ ಮೇಲೆ ಬಿದ್ದಿದೆ. ಆದರೆ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಯಾವುದೇ ರೀತಿಯ ಪ್ರಾಣಾಪಾಯವಾಗದೆ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಮನೆಯ ಛಾವಣಿಯ ಕಲ್ನಾರ್ ಸೀಟ್ ಗಳು ಪುಡಿಪುಡಿಯಾಗಿವೆ.ಇನ್ನು ಇದೇ ಗ್ರಾಮದ ಗ್ರಾಮ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಪಿ ಮಹದೇವು ರವರು ತಮ್ಮ ಜಮೀನಿನಲ್ಲಿ ನಿರ್ಮಿಸಿಕೊಂಡಿದ್ದ ಮನೆಯ ಛಾವಣಿ ಹಾರಿ ಹೋಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದೆ.

ಈ ಬಗ್ಗೆ ಮಾತನಾಡಿರುವ ಅವರು ರಾತ್ರಿ ಸುರಿದ ಭಾರಿ ಮಳೆ ಗಾಳಿಯಿಂದಾಗಿ ನಾವು ನಿರ್ಮಿಸಿದ ಮನೆಯ ಕಲ್ನಾರ್ ಸೀಟುಗಳು ಗಳು ಹಾರಿಹೋಗಿದ್ದು ಇದರಿಂದ ನಮಗೆ ಲಕ್ಷಾಂತರ ರೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಕೆಂಪಶೆಟ್ಟಿ ಎಂಬವರ ಮನೆಯ ಮೇಲೆ ಮರ ಬಿದ್ದ ಸುದ್ದಿ ಕೇಳಿ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡ ಮನ್ನೇಗೌಡರು ಮನೆ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು