ಮೈಸೂರು, ;ಸಹಕಾರ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಜೂನಿಯರ್ ಕಾಲೇಜು/ಹೈಸ್ಕೂಲ್ಗೆ ಭೇಟಿ ನೀಡಿದರು.
ಬಳಿಕ ಪೀಪಲ್ಸ್ ಪಾರ್ಕ್ ನಲ್ಲಿರುವ ಜೂನಿಯರ್ ಕಾಲೇಜ್/ಹೈಸ್ಕೂಲ್ ಗೆ ಭೇಟಿ ನೀಡಿದರು. ಇದೇ ವೇಳೆ ಪ್ರಾಂಶುಪಾಲರು ಸಚಿವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಸಚಿವರು ವಿದ್ಯಾರ್ಥಿಗಳ ಬಳಿ ಮಾತುಕತೆ ನಡೆಸಿದರು. ಈ ಸಂದರ್ಭ ಶಾಸಕರುಗಳಾದ ನಾಗೇಂದ್ರ, ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿದಂತೆ ಹಲವರು ಸಚಿವರ ಜೊತೆಗಿದ್ದರು.
ಮಹಾರಾಣಿ ಜೂನಿಯರ್ ಕಾಲೇಜು,ಹೈಸ್ಕೂಲ್ ಗೆ ಸಚಿವ ಎಸ್ ಟಿ.ಸೋಮಶೇಖರ್ ಭೇಟಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.