ಮೈಸೂರು: ವಿಶ್ವಶಾಂತಿ, ಲೋಕಲ್ಯಾಣದ ಸದಾಶಯದ ಹಾಗೂ ಗಣಪತಿ ಸಚ್ಚಿದಾನಂದ ಸ್ವಾಮೀಜಿ 80ನೇ ಹುಟ್ಟುಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಮೇಕೆದಾಟಿನಿಂದ ಮೈಸೂರುವರೆಗಿನ ಪಾದಯಾತ್ರೆ ಬುಧವಾರ ಮುಕ್ತಾಯಗೊಂಡಿದೆ.
ಗಣಪತಿ ಆಶ್ರಮದ ಕಿರಿಯ ಮಠಾಧೀಶ ದತ್ತ ವಿಜಯಾನಂದ ತೀರ್ಥರು ಮೇ 13ರಂದು ಮೇಕೆದಾಟಿನಿಂದ ಮೈಸೂರಿನತ್ತ ಪಾದಯಾತ್ರೆ ಆರಂಭಿಸಿದರು. 6 ದಿನಗಳ ಕಾಲ ನಡೆದ ಪಾದಯಾತ್ರೆ ಬುಧವಾರ ಅಂತ್ಯಗೊಂಡಿದೆ. 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಗಣಪತಿ ಸಚ್ಚಿದಾನಂದ ಶ್ರೀಗಳ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲು ಶ್ರೀಗಳ ಹುಟ್ಟೂರಾದ ಕನಕಪುರ ತಾಲೂಕಿನ ಮೇಕೆದಾಟು ಸಂಗಮ ಕ್ಷೇತ್ರದಿಂದ ಪಾದಯಾತ್ರೆ ಆರಂಭಿಸಲಾಗಿತ್ತು. ಬುಧವಾರ ಮುಂಜಾನೆ ಮೈಸೂರಿಗೆ ಪಾದಯಾತ್ರೆ ಆಗಮಿಸಿತು. ಮಾರ್ಗಮಧ್ಯದಲ್ಲಿ ಕುರುಬಾರಹಳ್ಳಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಊಟಿ ರಸ್ತೆಯಲ್ಲಿರುವ ಆಶ್ರಮದಲ್ಲಿ ನಡಿಗೆ ಮುಕ್ತಾಯಗೊಂಡಿತು.
ಕಿರಿಯ ಶ್ರೀಗಳನ್ನು ಶಾಸಕ ಎಸ್.ಎ.ರಾಮದಾಸ್, ನಗರಪಾಲಿಕೆ ಸದಸ್ಯ ಕೆ.ಜೆ.ರಮೇಶ್, ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೇಬಲ್ ಮಹೇಶ್, ಅಪೂರ್ವ ಸುರೇಶ್, ಮೋಹನ್, ಹರೀಶ್, ಶ್ಯಾಮ್, ಕುರುಬರಳ್ಳಿ ಮಂಜಣ್ಣ ಮುಂತಾದವರು ಸ್ವಾಗತಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…