News Karnataka Kannada
Sunday, May 05 2024
ಮೈಸೂರು

ಮೈಸೂರಲ್ಲಿ ಇಬ್ಬರು ಸರಗಳ್ಳರ ಬಂಧನ

Mysore
Photo Credit :

ಮೈಸೂರು: ನಗರದ ವಿವಿಧ ಭಾಗದಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರಿನ ಕುವೆಂಪುನಗರ ಠಾಣೆಯ ಪೊಲೀಸರು ಬಂಧಿಸಿದ್ದು, 4.27 ಲಕ್ಷ ಮೌಲ್ಯದ 95 ಗ್ರಾಂ ಮೂರು ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಜ.14 ರಂದು ರಾಮಕೃಷ್ಣನಗರ ಐ ಬ್ಲಾಕ್‌ನಲ್ಲಿ ಸರಗಳ್ಳತನ ನಡೆದಿದ್ದು, ಈ ಪ್ರಕರಣದ ತನಿಖೆ ಕೈಗೊಂಡ ಕುವೆಂಪುನಗರ ಠಾಣೆಯ ಪೊಲೀಸರು, ಜ.17 ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಿಸಿದಾಗ ಆರೋಪಿಗಳು ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ 2, ವಿದ್ಯಾರಣ್ಯಪುರಂ ಠಾಣೆ ವ್ಯಾಪ್ತಿಯಲ್ಲಿ 1 ಸರಗಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ, ಕೆ.ಆರ್. ಉಪ ವಿಭಾಗದ ಎಸಿಪಿ ಎಂ.ಎಸ್. ಪೂರ್ಣಚಂದ್ರ ತೇಜಸ್ವಿ ಅವರ ಮಾರ್ಗದರ್ಶನದಲ್ಲಿ ಕುವೆಂಪುನಗರ ಠಾಣೆಯ ಇನ್ಸ್‌ಪೆಕ್ಟರ್ ಕೆ. ಷಣ್ಮುಗ ವರ್ಮ, ವಿದ್ಯಾರಣ್ಯಪುರಂ ಠಾಣೆಯ ಇನ್ಸ್‌ಪೆಕ್ಟರ್ ಜಿ.ಸಿ. ರಾಜು, ಎಸ್‌ಐಗಳಾದ ಸಿ. ಇರ್ಷಾದ್, ಎನ್. ಅನಿಲ್ ಕುಮಾರ್, ಸಿಬ್ಬಂದಿ ಮಂಜುನಾಥ ಎಂಪಿ, ಯೋಗೇಶ, ಪುಟ್ಟಪ್ಪ, ಹರ್ಷವರ್ಧನ, ಹಜರತ್ ಅಲಿ, ನಾಗೇಶ, ಶ್ರೀನಿವಾಸ, ಮಾದೇಶ್, ಕೃಷ್ಣರಾಜ ವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿ ಈ ಪತ್ತೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು