ಮೈಸೂರು : ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜ ಕ್ಷೇತ್ರ ಹಾಗೂ ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
‘ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ವರ್ತನೆ ಖಂಡನೀಯ ಎಂದರು.
ಕಾಂಗ್ರೆಸ್ ನಾಯಕರ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಹೆಚ್ .ಜಿ ಗಿರಿಧರ್, ಬಿಜೆಪಿ ನಗರ ಯುವಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಮರಿಯಪ್ಪ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್, ನಗರ ಯುವ ಮೋರ್ಚಾ ಉಪಾಧ್ಯಕ್ಷ ಸಚಿನ್, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್, ನರಸಿಂಹ ರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಲೋಹಿತ್, ನಗರ ಯುವ ಮೋರ್ಚಾ ಕಾರ್ಯದರ್ಶಿ ಪುನಿತ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.