News Karnataka Kannada
Monday, May 06 2024
ಮೈಸೂರು

ಮೈಸೂರಲ್ಲಿ ಹೊದಿಕೆ ವಿತರಿಸಿ ಹೊಸ ವರ್ಷಾಚರಣೆ

Bedsheet
Photo Credit :

ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ರಸ್ತೆ ಬದಿಯ ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಆಚರಿಸಲಾಯಿತು.ಹೊಸ ವರ್ಷವನ್ನು ಮೋಜು ಮಸ್ತಿಯೊಂದಿಗೆ ಆಚರಿಸುವ ಬದಲಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಇತರರಿಗೆ ಟ್ರಸ್ಟ್ ಮಾದರಿಯಾಯಿತು.

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ನ ಯುವಕರ ತಂಡ  ನಿರಂತರವಾಗಿ 15ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ ಹೊದಿಕೆ ವಿತರಣೆ ನೀಡುತ್ತಾ ಬಂದಿದ್ದು, ಅದವರಂತೆ ವರ್ಷದ ಕಡೆಯ ದಿನ ನಗರದಲ್ಲಿ ಅಡ್ಡಾಡಿ ರಾಜ್ ಕುಮಾರ್ ರಸ್ತೆ, ಕ್ಯಾತಮಾರನಹಳ್ಳಿ ಹಾಗೂ ಸುತ್ತಮುತ್ತ ಮಲಗಿರುವ ನಿರಾಶ್ರಿತರಿಗೆ ಹೊದಿಕೆಯನ್ನು  ವಿತರಿಸಿದರಲ್ಲದೆ, ಇನ್ನೊಂದೆಡೆ  ಲಾರಿ ಕೆಳಗಡೆ ಜೀವನ ಸಾಗಿಸುತ್ತಿರುವ  ನಿರಾಶ್ರಿತರಿಗೆ ಸ್ಥಳಕ್ಕೆ ತೆರಳಿ ಹೊದಿಕೆ ನೀಡಿ ಮಾನವೀಯತೆ ಮೆರೆದರು.

ಯುವ ಸಮುದಾಯ ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಮುಳುಗಿ ಮೋಜು ಮಸ್ತಿ ಮಾಡಲು ಸ್ನೇಹಿತರೊಡನೆ ಪ್ರವಾಸಿ ಸ್ಥಳಕ್ಕೆ ತೆರಳಿ ಪಟಾಕಿ ಸಿಡಿಸಿ ಕೇಕ್ ಕಟ್ ಮಾಡಿ ಹಾಗೂ ಮೈಮರೆತು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುವ ಬದಲಿಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ರೂಢಿಸಿಕೊಳ್ಳುವಂತೆ ಜನತೆಗೆ ಸಂದೇಶಸಾರಿದರು.ಇದೇ ಸಂದರ್ಭದಲ್ಲಿ ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಸುಚೇಂದ್ರ, ಧನರಾಜ್, ರಾಕೇಶ್ ಕುಂಚಿಟಿಗ, ಎಸ್ ಎನ್ ರಾಜೇಶ್, ದೀಪಕ್, ಸಂದೇಶ, ಕಡಕೊಳ ಜಗದೀಶ್ ಮಾದಲಾದವರಿದ್ದರು,

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು