ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಶುಕ್ರವಾರ 364 ಮಕ್ಕಳು ಸೇರಿದಂತೆ ಒಟ್ಟು 1877 ಜನರಿಗೆ ಸೋಂಕು ಹರಡಿದೆ. ಜತೆಗೆ 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಮೈಸೂರು ನಗರದಲ್ಲಿ 1250, ಎಚ್.ಡಿ.ಕೋಟೆ 49, ಹುಣಸೂರು 71, ಕೆ.ಆರ್.ನಗರ 84, ಮೈಸೂರು ತಾಲೂಕು 85, ನಂಜನಗೂಡು 32, ಪಿರಿಯಾಪಟ್ಟಣ 237 ಹಾಗೂ ತಿ.ನರಸೀಪುರದಲ್ಲಿ 39, ಸಾಲಿಗ್ರಾಮ ತಾಲೂಕಿನಲ್ಲಿ 24 ಮತ್ತು ಸರಗೂರಿನಲ್ಲಿ 6 ಪ್ರಕರಣಗಳು ದಾಖಲಾಗುವ ಮೂಲಕ 364 ಮಕ್ಕಳು ಸೇರಿದಂತೆ 1877 ಮಂದಿಗೆ ಕೊರೊನಾ ಸೋಂಕು ಹರಡಿದೆ. ಇವರಲ್ಲಿ 5 ವರ್ಷದ ಒಳಗಿನ 24, 6ರಿಂದ 10 ವರ್ಷದ 61, 11ರಿಂದ 17 ವರ್ಷದ 279 ಮಕ್ಕಳಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
3762 ಮಂದಿ ಡಿಸ್ಚಾರ್ಜ್: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಶುಕ್ರವಾರವೂ 3762 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 201395ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 12022 ಸಕ್ರಿಯ ಪ್ರಕರಣಗಳಿದ್ದು, ಹೋಂ ಐಸೋಲೇಷನ್ ಸೇರಿದಂತೆ “”ಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ ಹೊಸ ಪ್ರಕರಣ ಸೇರಿದಂತೆ ಇದುವರೆಗೆ 2,15,890 ಮಂದಿಗೆ ಸೋಂಕು ತಗುಲಿದೆ.
8 ಮಂದಿ ಬಲಿ: ಜಿಲ್ಲೆಯಲ್ಲಿ ಶುಕ್ರವಾರ 67, 61, 65, 63, 51 ಹಾಗೂ 78 ವರ್ಷದ ಪುರುಷರು, 75, ಹಾಗೂ 70 ವರ್ಷದ ಮ”ಳೆ ಸೇರಿದಂತೆ 8 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,473ಕ್ಕೆ ಹೆಚ್ಚಳವಾಗಿದೆ.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…