ಮೈಸೂರು: ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಇಂದ್ರಜಿತ್ ಲಂಕೇಶ್ ವಿರುದ್ಧ ನಟ ದರ್ಶನ್ ಅಭಿಮಾನಿಗಳು ನಗರದ ಎಂಜಿ ರಸ್ತೆಯ ದಿವಾನ್ ಪೂರ್ಣಯ್ಯ ಛತ್ರದ ಬಳಿ ಪ್ರತಿಭಟನೆ ನಡೆಸಿದರು
ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ದರ್ಶನ್ ಅಭಿಮಾನಿಗಳು ಇಂದ್ರಜಿತ್ ಲಂಕೇಶ್ ಫ್ಲೆಕ್ಸ್ಗೆ ಮಸಿ ಬಳಿದು, ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ನಟ ದರ್ಶನ್ ವಿರುದ್ಧ ಮಾತನಾಡಿದ್ದಲ್ಲದೆ, ಪೊಲೀಸರನ್ನ ಬಳೆ ತೊಟ್ಟುಕೊಳ್ಳಿ ಎಂದಿದ್ದ ಇಂದ್ರಜಿತ್ ಕ್ಷಮೆಯಾಚಿಸುವಂತೆ ಆಗ್ರಹಿಸಿದರು..
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕನ್ನಡ ಚಳುವಳಿ ಕೇಂದ್ರ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಇಂದ್ರಜಿತ್ ಲಂಕೇಶ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದು, ಸ್ಮರಣ್, ನಿಶಾಂತ್, ಪ್ರಶಾಂತ್, ಶೇಖರ್, ಅಮಿತ್, ವಿನಾಯಕ, ಮೂರ್ತಿ ಹಾಗೂ ಇನ್ನಿತರರು ಭಾಗಿಯಾಗಿದ್ದರು. ಯಾವುದೇ ಅವಘಡ ನಡೆಯದಂತೆ ಬಿಗಿಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.