ಮೈಸೂರು: ಯುವ ಭಾರತ ಸಂಘಟನೆ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ವೃತ್ತದಲ್ಲಿ ದೇಶಪ್ರೇಮ ದಿನ ಹಾಗೂ ಪುಲ್ವಾಮಾ ದಾಳಿ ಕರಾಳ ದಿನ ವನ್ನು ಆಚರಿಸಲಾಯಿತು .
ಇದೇ ವೇಳೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು ಪ್ರೇಮಿಗಳ ದಿನಾಚರಣೆಗೆ ಧಿಕ್ಕಾರ, ವಿಶ್ವ ದೇಶಪ್ರೇಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ, ವೀರ ಯೋಧರು ಅಮರರಾಗಲಿ, ಸೈನಿಕರ ದಿನಾಚರಣೆಗೆ ಜಯವಾಗಲಿ ಎಂಬ ಘೋಷಣೆಗಳನ್ನು ಹೋಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ,
ಈ ವೇಳೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ ಮಾತನಾಡಿ, ಭಾರತ ದೇಶ ಪುರಾತನವಾದದ್ದು, ಪ್ರೇಮ ದಿನಾಚರಣೆ ನಮ್ಮ ಸಂಸ್ಕೃತಿಯಲ್ಲ. ಪ್ರೀತಿ ಪ್ರೇಮ ಎನ್ನುವುದು ತಂದೆ –ತಾಯಿ, ಗುರು- ಹಿರಿಯರು ದೇಶದ ಬೆನ್ನಲುಬಾದ ಸೈನಿಕರು ಮತ್ತು ರೈತರ ಮೇಲೆ ಇರಬೇಕು. ಅರ್ಥವಿಲ್ಲದ ಪ್ರೇಮಿಗಳ ದಿನಾಚರಣೆ ಸಲ್ಲದು ಎಂದು ನುಡಿದರು ಯಶಸ್ವಿನಿ ಸೋಮಶೇಖರ್ ಮಾತನಾಡಿ ನರರೂಪದ ರಕ್ಕಸರು ಈ ದೇಶದ ಏಕತೆ, ಸೌಹಾರ್ದತೆ, ಶಾಂತಿ-ಸಾಮರಸ್ಯವನ್ನು ಕದಡಲು ಮಾಡಿರುವ ವ್ಯವಸ್ಥಿತ ಪ್ರಯತ್ನ ಇದಾಗಿದೆ. ನಿರಂತರವಾಗಿ ಕಳೆದ ಐದು ವರ್ಷಗಳಲ್ಲಿ ಇದು ಐದನೇಯ ಕರಾಳ ಘಟನೆ. 2006 ಸೆಪ್ಟೆಂಬರ್ 18 ರಂದು ನಮ್ಮ ಸೈನಿಕರು ನಿದ್ರೆಯಲ್ಲಿರುವಾಗ ಉಗ್ರರು ದಾಳಿ ನಡೆಸಿ ಕೊಂದಿರುವ ಕರಾಳ ಘಟನೆಯ ಕ್ರೌರ್ಯ ನೆನಪು ಮಾಸುವ ಮುನ್ನವೇ ಈ ದುಷ್ಕೃತ್ಯ ನಡೆದಿರುವುದು ಇನ್ನಷ್ಟು ಆತಂಕಕ್ಕೀಡು ಮಾಡಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ವೈ ಡಿ ರಾಜಣ್ಣ ಮಾತನಾಡಿ ಇಡೀ ದೇಶಕ್ಕೋಸ್ಕರ ತಮ್ಮ ಜೀವವನ್ನು ಒತ್ತೆ ಇಟ್ಟು ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರ ಮೇಲೆ ಈ ರೀತಿಯ ದುಷ್ಕೃತ್ಯ ನಡೆಸಿರುವ ಸಂಘಟನೆಗೆ ಪಾಕಿಸ್ತಾನ ನಿರಂತರವಾಗಿ ಕುಮ್ಮಕ್ಕನ್ನು ಕೊಡುತ್ತಿದೆ. ಇಂತಹ ದುಷ್ಕೃತ್ಯವನ್ನು ಇಡೀ ಜಗತ್ತು ಖಂಡಿಸಿದೆ. 1996ರಲ್ಲಿ ಭಾರತದ ಜೊತೆಗಿನ ಮಾತುಕತೆಯಲ್ಲಿ ಭಾರತ ಪಾಕಿಸ್ತಾನವನ್ನು ಪರಮಾಪ್ತ ದೇಶ ಎಂಬ ರೀತಿಯಲ್ಲಿ ಘೋಷಣೆ ಮಾಡಿತ್ತು. ಎಂದು ಹೇಳಿದರು
ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಮಾತನಾಡಿ ಭಾರತ ಪಾಕಿಸ್ತಾನವನ್ನು ಪರಮಾಪ್ತ ದೇಶ ಅಲ್ಲ ಎಂಬ ರೀತಿಯಲ್ಲಿ ಇಡೀ ಜಗತ್ತಿಗೆ ಸಾರಿ ಹೇಳಿದೆ. ಉರಿಯಲ್ಲಿ ನಡೆದಂತಹ ಭಯೋತ್ಪಾದನ ದಾಳಿಗೆ ಸೈನ್ಯ ಹೇಗೆ ಉತ್ತರ ಕೊಟ್ಟಿತೋ ಅದೇ ರೀತಿಯ ಉತ್ತರವನ್ನು ಕೊಡಲು ನಮ್ಮ ಸೇನೆ ಸಶಕ್ತವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನಗರ ಪಾಲಿಕೆ ನಾಮ ನಿರ್ದೇಶಕರಾದ ಜಗದೀಶ್, ಮುಡಾ ಸದಸ್ಯರಾದ ಲಕ್ಷ್ಮೀದೇವಿ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾ ಅಧ್ಯಕ್ಷ ಜೋಗಿ ಮಂಜು, ಬಿಜೆಪಿ ಚಾಮರಾಜ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಎನ್ ಆರ್ ಯುವಮೋರ್ಚಾ ಅಧ್ಯಕ್ಷ ಲೋಹಿತ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಶರತ್, ಪ್ರಶಾಂತ್, ರಂಗನಾಥ್, ಸುಚೀಂದ್ರ, ಚರಣ್, ಲಿಂಗರಾಜು, ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಉಪಾಧ್ಯಕ್ಷ ಸೂರಜ್, ಚಕ್ರಪಾಣಿ ಹಾಗೂ ಇನ್ನಿತರರು ಹಾಜರಿದ್ದರು