News Karnataka Kannada
Thursday, May 02 2024
ಮೈಸೂರು

ಮೈಸೂರಿನಲ್ಲಿ ಪ್ರವಾಸಿಗರಿಗಾಗಿ ಅಂಬಾರಿ ಬಸ್ ಸಂಚಾರ

New Project (1)
Photo Credit :

ಮೈಸೂರು: ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆಯು ಸೆ.4ರಿಂದ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಡಬಲ್ ಡೆಕ್ಕರ್ ಅಂಬಾರಿ ಬಸ್‌ ಸಂಚಾರವನ್ನು ಆರಂಭಿಸಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪುಸಿದ್ದಲಿಂಗಸ್ವಾಮಿ ತಿಳಿಸಿದ್ದಾರೆ.

ಇನ್ನು ಡಬಲ್ ಡೆಕ್ಕರ್ ಅಂಬಾರಿ ಬಸ್ ಸಂಚಾರದ ಮಾರ್ಗಗಳ ವಿವರಗಳನ್ನು ಕೂಡ ನೀಡಿದ್ದು, ನಗರದ ಪ್ರವಾಸೋದ್ಯಮ ಇಲಾಖೆಯ ಆವರಣ (ಹೋಟೆಲ್ ಮಯೂರ ಹೊಯ್ಸಳ) ದಿಂದ ಹೊರಡುವ ಅಂಬಾರಿ ಬಸ್ ನಗರದ  ಜಿಲ್ಲಾಧಿಕಾರಿ ಕಚೇರಿ, ಕುಕ್ಕರಹಳ್ಳಿಕೆರೆ, ಮೈಸೂರು ವಿಶ್ವವಿದ್ಯಾನಿಲಯ, ರಾಮಸ್ವಾಮಿ ಸರ್ಕಲ್, ಸಂಸ್ಕೃತಪಾಠಶಾಲೆ, ಕೆ.ಆರ್.ಸರ್ಕಲ್, ದೊಡ್ಡಗಡಿಯಾರ, ಅರಮನೆ ದಕ್ಷಿಣದ್ವಾರ, ಹಾರ್ಡಿಂಗ್ ಸರ್ಕಲ್, ಮೃಗಾಲಯ, ಕಾರಂಜಿಕೆರೆ, ಗೌರ್ಮೆಂಟ್ ಗೆಸ್ಟ್ ಹೌಸ್, ಸಂತ ಫಿಲೋಮಿನಾ ಚರ್ಚ್, ಬನ್ನಿಮಂಟಪ, ಆಯುರ್ವೇದಿಕ್ ಆಸ್ಪತ್ರೆ ಸರ್ಕಲ್, ರೈಲ್ವೆ ನಿಲ್ದಾಣದ ಮೂಲಕ ಹೊರಟ ಸ್ಥಳ ಹೋಟೆಲ್ ಮಯೂರ ಹೊಯ್ಸಳವನ್ನು ತಲುಪಲಿದೆ.

ಅಂಬಾರಿಯಲ್ಲಿ ಸಂಚರಿಸುವ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪ್ರವಾಸಿಗರು ಪಡೆಯಲು ಬಯಸುವುದಾದರೆ ದೂರವಾಣಿಸಂಖ್ಯೆ (0821-2423652) ಗೆ ಕರೆ ಮಾಡಿ ಪಡೆಯುವಂತೆ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು