ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ತನ್ನ 15 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿ ಸಲಾಯಿತು.
ನಗರದ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರ್ಯಾಂಡ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಸಾಮಾಜಿಕ ರತ್ನ ಪ್ರಶಸ್ತಿಯನ್ನು ಡಾ.ಭಾನುಪ್ರಕಾಶ್ ಶರ್ಮಾ ಧಾರ್ಮಿಕ ಕ್ಷೇತ್ರ, ಮಡ್ಡಿಕೆರೆ ಗೋಪಾಲ್, ಸಾಹಿತ್ಯ ಕ್ಷೇತ್ರ, ಸಿ ನಾರಾಯಣಗೌಡ ಉದ್ಯಮ ಕ್ಷೇತ್ರ, ಅನಿಲ್ ಕುಮಾರ್ ಪತ್ರಿಕಾರಂಗ ಕ್ಷೇತ್ರ, ದೇವೆಂದ್ರ ಪರಿಹಾರಿಯ(ಸಂಘಟನಾ ಕ್ಷೇತ್ರ , ಶೋಭಾ ದಿನೇಶ್ (ಸಾಮಾಜಿಕ ಕ್ಷೇತ್ರ ), ಪ್ರಕಾಶ್ ಚಿಕ್ಕಪಾಳ್ಯ (ಕಲಾಕ್ಷೇತ್ರ ), ಕೇಬಲ್ ಮಹೇಶ್ (ರಾಜಕೀಯ ಕ್ಷೇತ್ರ )ಸುಹಾಸ್ (ಕ್ರೀಡಾ ಕ್ಷೇತ್ರ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ ಅವರು, ಕೆಎಂಪಿಕೆ ಟ್ರಸ್ಟ್ ಹಲವಾರು ವರ್ಷಗಳಿಂದ ಸಾಮಾಜಿಕ ಸಾಂಸ್ಕೃತಿಕ ಧಾರ್ಮಿಕ ಪರಿಸರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನ ಉತ್ತಮ ರೀತಿಯಲ್ಲಿ ಆಯೋಜಿಸಿ ಸಾಕಷ್ಟು ಜನರಿಗೆ ಉಪಯುಕ್ತವಾಗಿದೆ, ಸರ್ಕಾರಿ ಸವಲತ್ತು ಬಡವರ್ಗದವರಿಗೆ ಸಾರ್ವಜನಿಕರಿಗೆ ತಲುಪಬೇಕು ಎಂದರೆ ಸಾಮಾಜಿಕ ಸಂಘ ಸಂಸ್ಥೆಗಳ ಪಾತ್ರ ಮಹತ್ವವಾದುದು ಎಂದರು.
ಪರಮಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ, ಬಿಜೆಪಿ ಮುಖಂಡರಾದ ಯಶಸ್ವಿನಿ ಸೋಮಶೇಖರ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವಲಯ ಉಪಾಧ್ಯಕ್ಷರಾದ ನಟರಾಜ್ ಜೋಯಿಸ್, ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್, ಕಾಂಗ್ರೆಸ್ ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ಮುಡಾ ಸದಸ್ಯರಾದ ಲಕ್ಷ್ಮೀದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ನಿರ್ದೇಶಕರಾದ ರೇಣುಕರಾಜ, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ನಗರ ಪಾಲಿಕಾ ಸದಸ್ಯರಾದ ಜಗದೀಶ, ಕಾಂಗ್ರೆಸ್ ಮುಖಂಡರಾದ ರೇಖಾ ಶ್ರೀನಿವಾಸ್, ಅಪೂರ್ವ ಸುರೇಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ರಾಕೇಶ್ ಭಟ್, ಸುಚೇಂದ್ರ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ , ರಾಕೇಶ್ ಕುಂಚಿಟಿಗ ಹಾಗೂ ಇನ್ನಿತರರು ಇದ್ದರು.