News Karnataka Kannada
Saturday, May 11 2024
ಮೈಸೂರು

ಮೈಸೂರು : ಐತಿಹಾಸಿಕ ಸುತ್ತೂರು ಜಾತ್ರೆ ರದ್ದು

Sattur
Photo Credit :

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿ ಜ.28 ಶುಕ್ರವಾರದಿಂದ ಫೆ. 2 ಬುಧವಾರದವರೆಗೆ ನೆರವೇರಬೇಕಾಗಿದ್ದ. ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ರದ್ದುಪಡಿಸಲಾಗಿದೆ.

ಕೋವಿಡ್-19ರ ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಸರ್ಕಾರ ರಾತ್ರಿ ವೇಳೆ ಹಾಗೂ ವಾರಾಂತ್ಯಗಳಲ್ಲಿ ಕರ್ಫ್ಯೂ ಘೋಷಿಸಿದೆ. ಸೋಂಕು ಮತ್ತಷ್ಟು ಉಲ್ಬಣಿಸಿದರೆ ಕಾನೂನಿನ ಕಟ್ಟುಪಾಡುಗಳು ಮತ್ತಷ್ಟು ಕಠಿಣಗೊಳ್ಳಲಿವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಈ ಬಾರಿಯ ಜಾತ್ರೆಯನ್ನು ಪೂರ್ಣವಾಗಿ ರದ್ದುಪಡಿಸಲಾಗಿದೆ. ರಥೋತ್ಸವ, ತೆಪ್ಪೋತ್ಸವ, ಸಾಮೂಹಿಕ ವಿವಾಹ, ವಸ್ತುಪ್ರದರ್ಶನ,  ಕೃಷಿಮೇಳ, ಕುಸ್ತಿ ಪಂದ್ಯಾವಳಿ, ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂಗಡಿ ಮುಂಗಟ್ಟುಗಳು- ಇತ್ಯಾದಿ ಯಾವುವೂ ಇರುವುದಿಲ್ಲ. ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಒಂದೇ ದಿವಸಕ್ಕೆ ಸೀಮಿತಗೊಳಿಸಿ ಆಚರಿಸಲಾಗುತ್ತದೆ.

ಈ ಕಾರಣಗಳಿಂದಾಗಿ ಸೇವಾರ್ಥದಾರರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಯಾರಿಗೂ ಶ್ರೀಕ್ಷೇತ್ರಕ್ಕೆ ಪ್ರವೇಶವಿರುವುದಿಲ್ಲ. ಸಾಂಪ್ರದಾಯಿಕವಾಗಿ- ಸಾಂಕೇತಿಕವಾಗಿ ಜನವರಿ 29ರಂದು ಸಂಜೆ ಹಾಗೂ 30ರಂದು ನಡೆಯುವ ಧಾರ್ಮಿಕ ಆಚರಣೆಗಳನ್ನು ಆನ್ಲೈನ್‌ನಲ್ಲಿ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು