News Karnataka Kannada
Tuesday, April 30 2024
ಮೈಸೂರು

ಮೈಸೂರು: ಚೆನ್ನೈಗೆ ಜೀವಂತ ಹೃದಯ ರವಾನೆ

Mysore
Photo Credit :

ಮೈಸೂರು: ಅಪಘಾತದಲ್ಲಿ ಮಿದುಳು ನಿಷ್ಕ್ರಿಯವಾಗಿದ್ದ ಯುವಕನ ಜೀವಂತ ಹೃದಯವನ್ನು ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ರವಾನೆ ಮಾಡಲಾಗಿದೆ.

ಜ.18ರಂದು ಅಪಘಾತದಲ್ಲಿ ಗಾಯಗೊಂಡಿದ್ದ ದರ್ಶನ್ (24) ಅವರನ್ನು ನಗರದ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪಘಾತದಲ್ಲಿ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆ ಯುವಕನ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ದರ್ಶನ್ ಅವರ ಹೃದಯವನ್ನು ಚೆನ್ನೈಗೆ ರವಾನೆ ಮಾಡಲಾಯಿತು.

ಆಸ್ಪತ್ರೆಯಿಂದ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್‌ನಲ್ಲಿ 10 ನಿಮಿಷದಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು 2.30ಕ್ಕೆ ತಲುಪಿಸಲಾಗಿದೆ. ಇಲ್ಲಿಯಿಂದ ವಿಮಾನದ ಮೂಲಕ ಚೆನ್ನೈನ ಎಂಜಿಎಂ ಹೆಲ್ತ್ ಕೇರ್‌ಗೆ ಹೃದಯವನ್ನು ಕಳುಹಿಸಿಕೊಡಲಾಯಿತು.

ಒಂದು ಕಿಡ್ನಿ ಮತ್ತು ಯಕೃತ್ತು ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲೇ ಕಸಿ ಮಾಡಿದ್ದರೆ, ಇನ್ನೊಂದು ಕಿಡ್ನಿಯನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಕಾರ್ನಿಯಾ ಅಂಗವನ್ನು ನಗರದ ನೇತ್ರ ಬ್ಯಾಂಕ್‌ಗೆ ನೀಡಲಾಗಿದೆ ಎಂದು ಆಸ್ಪತ್ರೆಯ ಆಡಳಿತ ವಿಭಾಗದ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ತಿಳಿಸಿದ್ದಾರೆ.

ಮೂಲತಃ ಗುಂಡ್ಲುಪೇಟೆಯ ದರ್ಶನ್, ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದರು. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಎರಡು ತಿಂಗಳ ಮಗು ಇದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು