ಮೈಸೂರು(ಏ.02) : ಮದುವೆ ಆಗುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಪ್ರಿಯಕರ ಮೋಸ ಮಾಡಿದ್ದಾರೆ. ಪ್ರೀತಿಸಿದಾತನ ಮೋಸದಾಟದಿಂದ ಬೇಸತ್ತ ಯುವತಿ ತನ್ನ ಹುಟ್ಟುಹಬ್ಬದ ದಿನವೇ ಆತನದ್ದೇ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.
ಹೌದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಪ್ರಭುಸ್ವಾಮಿ ಎಂಬುವರ ಪುತ್ರ ತ್ಯಾಗರಾಜ್ ಹಾಗೂ ಅದೇ ಗ್ರಾಮದ ಕಾವ್ಯ ನಡುವೆ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವಕ ಮದುವೆ ಆಗುವುದಾಗಿ ನಂಬಿಸಿ ಕಾವ್ಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ. ಅಲ್ಲದೇ ಕಳೆದ ಮೂರು ದಿನಗಳ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಲು ಮುಂದಾದ ತ್ಯಾಗರಾಜ್ ಕಾವ್ಯಾಳನ್ನೂ ಸಹ ಆಹ್ವಾನಿಸಿದ್ದ. ಆದರೆ ಈ ವೇಳೆ ಕಾವ್ಯಾ ಮದುವೆ ವಿಚಾರವನ್ನು ಪ್ರಸ್ತಾಪಿಸಿದ್ದಾಳೆ.
ಆದರೆ ಈ ಅನಿರೀಕ್ಷಿತ ಪ್ರಶ್ನೆಯಿಂದ ಮುಜುಗರಕ್ಕೀಡಾದ ತ್ಯಾಗರಾಜ್ ಸ್ನೇಹಿತರೆದುರೇ ಪ್ರೀತಿಸಿದ ಯುವತಿಯ ಕಪಾಳಕ್ಕೆ ಹೊಡೆದು ಅವಮಾನ ಮಾಡಿದ್ದಾನೆ. ಪ್ರೀತಿಸಿದಾತನ ಈ ನಡೆಯಿಂದ ಮನನೊಂದ ಯುವತಿ ಪ್ರಿಯಕರನ ಮನೆಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕಾವ್ಯಾ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.