ಮೈಸೂರು : ಮೈಸೂರು ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ತನ್ನ 2 ವರ್ಷದ ಮಗುವನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಅನ್ನಪೂರ್ಣ (22) ತನ್ನ 2 ವರ್ಷದ ಮಗ ಮೋಕ್ಷೀತ್ ನನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅನ್ನಪೂರ್ಣ 2 ವರ್ಷಗಳ ಹಿಂದೆ ಮಹದೇವ ಪ್ರಸಾದ್ನನ್ನು ವಿವಾಹವಾಗಿದ್ದರು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.