News Karnataka Kannada
Saturday, May 04 2024
ಮೈಸೂರು

ಮೈಸೂರು ವಿವಿಯಲ್ಲಿ ನಡೆದ ಭ್ರಷ್ಟಾಚಾರದ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Mysore University
Photo Credit :

ಮೈಸೂರು ;ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಪ್ರಶ್ನೆ ಮಾಡಿದ್ದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದು ಮತ್ತು ಸಂಘಟನೆಯ ಕಾರ್ಯದರ್ಶಿಗಳಿಗೆ ಕೊಲೆ ಬೆದರಿಕೆ ಒಡ್ಡಿರುವುದನ್ನು ಖಂಡಿಸಿ, ಭ್ರಷ್ಟಾಚಾರದ ಸಮಗ್ರ ತನಿಖೆಗೆ ಒತ್ತಾಯಿಸಿ ಮಹಾನಾಯಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ವಿವಿ ಕಾರ್ಯಸೌಧದ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ವಿವಿಯಲ್ಲಿ ನಡೆದ ಅಪಾರವಾದ ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ಡಾ.ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ. ಇದು ದಲಿತ ಸಮುದಾಯಕ್ಕೆ ಹಾಗೂ ನಾಗರಿಕ ಸಮಾಜಕ್ಕೆ ಮಾಡಿದ ಅವಮಾನ. ಇಂತಹ ಕುಲಪತಿ ನಮಗೆ ಬೇಡ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಾವಿರಾರು ಮಂದಿ ಬದುಕುಗಳನ್ನು ಕಟ್ಟಿಕೊಳ್ಳಲು ಶ್ರಮಿಸಿ ಉಪನ್ಯಾಸಕನಾಗಬೇಕು ಎಂದು ಬಯಸಿ ಕೆ-ಸೆಟ್ ಪರೀಕ್ಷೆಯನ್ನು ಬರೆದರೆ ಅದರಲ್ಲಿಯೂ ಸಾವಿರಾರು ಜನರಿಗೆ ಮೋಸ ಮಾಡಿ ಈ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ನಮ್ಮ ಬಳಿ ಕೆಲವು ದಾಖಲೆಗಳಿವೆ ಎಂದರು. ಈ ಕುರಿತು ಸಮಗ್ರ ತನಿಖೆಯಾಗಬೇಕು. ವಿವಿಯಲ್ಲಿ ಹಣವಿಲ್ಲವೆಂದು ವಿವಿ ಹಣಕಾಸು ಅಧಿಕಾರಿಗಳು ಕೊರತೆ ಬಜೆಟ್ ಮಂಡಿಸುತ್ತಾರೆ. ಆದರೆ ಕುಲಪತಿಗಳ ಆಪ್ತರಿಗೆ ಟೆಂಡರ್ ನೀಡಿ ಕಟ್ಟಡ ಕಾಮಗಾರಿಯನ್ನು ನಡೆಸುತ್ತಾರೆ ಇದು ಹೇಗೆ ಎಂದು ತಿಳಿಯುತ್ತಿಲ್ಲ. ಇದರಲ್ಲೂ ಸಹ ನೂರಾರು ಕೋಟಿಯ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಭ್ರಷಾಚಾರದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು