News Karnataka Kannada
Tuesday, April 30 2024
ಮೈಸೂರು

ಮೈಸೂರು: ಹುಲಿ ದಾಳಿಗೆ ಎರಡು ಹಸುಗಳು ಬಲಿ

Chamarajanagar: Tiger project completes 50 years successfully
Photo Credit :

ಮೈಸೂರು: ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಡಿçÃಯ ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ.ಕಣ್ಣಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಛೇರಿ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು