News Karnataka Kannada
Sunday, April 28 2024
ಮೈಸೂರು

ಮೊಸಂಬಾಯನಹಳ್ಳಿಯಲ್ಲಿ ಕೆರೆ ನೀರು ಜಾನುವಾರುಗಳಿಗೆ ಮಾತ್ರ!

Cow
Photo Credit :

ಮೈಸೂರು: ಸಾಮಾನ್ಯವಾಗಿ ಗ್ರಾಮದಲ್ಲೊಂದು ಕೆರೆಯಿದ್ದರೆ ಅದು ಎಲ್ಲದಕ್ಕೂ ಬಳಕೆಯಾಗುತ್ತದೆ. ಆದರೆ ತಾಲೂಕಿನ ಮೊಸಂಬಾಯನಹಳ್ಳಿ ಜನ ಮಾತ್ರ ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ಹಾಹಾಕಾರ ಬರಬಹುದು. ಇದರಿಂದ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಎಂಬ ಮುಂಜಾಗ್ರತೆಯಿಂದ ಈ ನಿರ್ಧಾರಕ್ಕೆ ಬಂದಿರುವುದು ಕಾಣಿಸುತ್ತಿದೆ. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಹೀಗಾಗಿ ಇವತ್ತು ಗ್ರಾಮಸ್ಥರೆಲ್ಲರೂ ಒಂದೊಳ್ಳೆಯ ತೀರ್ಮಾನಕ್ಕೆ ಬಂದಿದ್ದರಿಂದ ಯಾರೂ ಕೆರೆಯ ನೀರನ್ನು ಅನ್ಯ ಉದ್ಧೇಶಕ್ಕೆ ಬಳಸದ ಕಾರಣ ಇವತ್ತು ಕೆರೆಯಲ್ಲಿ ಸಾಕಷ್ಟು ನೀರಿದೆ. ಇದರಿಂದ  ಜಾನುವಾರುಗಳಿಗೆ ಸಹಾಯವಾಗಿದೆ.  ಕೆರೆಯ ಸುತ್ತಲೂ ಪ್ರಾಣಿಪಕ್ಷಿಗಳು ಬೀಡು ಬಿಟ್ಟು ಬದುಕು ಕಟ್ಟಿಕೊಂಡಿವೆ. ಇನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

ಒಟ್ಟಾರೆಯಾಗಿ ಹೇಳಬೇಕೆಂದರೆ ಗ್ರಾಮಸ್ಥರ ಸಮಯಪ್ರಜ್ಞೆ ನೀರಿನ ಸಂರಕ್ಷಣೆಗೆ ಒತ್ತು ನೀಡಿದ್ದು, ಎಲ್ಲರೂ ತಮ್ಮ ಗ್ರಾಮಗಳಲ್ಲಿರುವ ಕೆರೆಗಳ ನೀರನ್ನು ಸಂರಕ್ಷಣೆ ಮಾಡಿದರೆ ಕೆರೆಗಳ ಉಳಿವು ಜತೆಗೆ ನೀರಿನ ಸಂರಕ್ಷಣೆಯೂ ಸಾಧ್ಯವಾಗಿ ಅಂತರ್ಜಲ ಹೆಚ್ಚಾಗಲಿದೆ ಎಂಬುದಂತು ಸತ್ಯ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು