News Karnataka Kannada
Thursday, May 02 2024
ಮೈಸೂರು

ಮೋದಿಗೆ ಪತ್ರ ಬರೆದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ

Sl Bairappa
Photo Credit :

ಮೈಸೂರು : ಕೇಂದ್ರ ಸರ್ಕಾರದ ‘ಪ್ರಸಾದ ಯೋಜನೆಯಡಿ ಚಾಮುಂಡಿಬೆಟ್ಟವನ್ನು ಕಾಂಕ್ರಿಟ್ ಕಾಡಾಗಿ ಪರಿವರ್ತಿಸುವ ಬದಲು, ಅಲ್ಲಿ ಈಗ ತಲೆಎತ್ತಿರುವ ಕಟ್ಟಡಗಳನ್ನು ಕೆಡವಬೇಕು ಎಂದು ಸಾಹಿತಿ ಎಸ್.ಎಲ್ ಬೈರಪ್ಪನವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪತ್ರದಲ್ಲಿ ತೀರ್ಥಕ್ಷೇತ್ರಗಳ ಪುನಶ್ಚೇತನ, ಆಧ್ಯಾತ್ಮ ಮತ್ತು ಪಾರಂಪರಿಕ ವರ್ಧನೆ ಯೋಜನೆಯಡಿ(ಪ್ರಸಾದ) ಚಾಮುಂಡಿಬೆಟ್ಟದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ನೋಡಿ ನೋವುಂಟಾಗಿದೆ. ಬೆಟ್ಟದ ನೈಸರ್ಗಿಕ ಸೌಂದರ್ಯ ಉಳಿಯಬೇಕು. ಆಧುನಿಕ ಶೈಲಿಯ ಕಟ್ಟಡಗಳು ತಲೆ ಎತ್ತಬಾರದು. ಪರಿಸರಕ್ಕೆ ಪೂರಕವಾದ ಹೊಸ ಪರಿಕಲ್ಪನೆಯ ಅಭಿವೃದ್ಧಿಯ ಕೆಲಸಗಳು ನಡೆಯಲಿ ಎಂದು ಕೋರಿದ್ದಾರೆ.

ಇನ್ನಷ್ಟು ನಿರ್ಮಾಣ ಚಟುವಟಿಕೆಗಳ ಬದಲು, ಅಲ್ಲಿರುವ ಕಟ್ಟಡಗಳನ್ನು ಕೆಡವಬೇಕು. ವಿಐಪಿಗಳ ವಾಹನ ಸೇರಿದಂತೆ ಎಲ್ಲ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಬೇಕು. ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸಬೇಕು ಎಂಬ ಉತ್ತಮವಾದ ಸಲಹೆಗಳನ್ನು ಪತ್ರದಲ್ಲಿ ನೀಡಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿಯವರು ಮಾತ್ರ ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡಬೇಕು. ಇತರರಿಗೆ ಅವಕಾಶವನ್ನು ಕೊಡಬಾರದು. ಆಧ್ಯಾತ್ಮ ಹಾಗೂ ಪ್ರಶಾಂತತೆ ಬಯಸಿ ಬರುವವರಿಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದಿದ್ದಾರೆ.

ರಾಜ್ಯದಲ್ಲಿ ಈ ಹಿಂದಿದ್ದ ಸರ್ಕಾರ ಬೆಟ್ಟದ ಮೇಲೆ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ, ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ ಪರಿಣಾಮ, ಯಾತ್ರಾಸ್ಥಳ ಎನಿಸಿದ್ದ ಬೆಟ್ಟ ವಾಣಿಜ್ಯ ಕೇಂದ್ರವಾಗಿದೆ. ಅಲ್ಲಿದ್ದ ಪ್ರಶಾಂತತೆ ನಾಶವಾಗಿದೆ ಎಂದು ದೂರಿದ್ದಾರೆ.

ಬೆಟ್ಟದ ಜನಸಂಖ್ಯೆ ಈಗ 4 ಸಾವಿರ ದಾಟಿದೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಿ ಮೈಸೂರು ನಗರದಲ್ಲಿ ಪುನರ್ವಸತಿ ಕಲ್ಪಿಸಬೇಕು. ಆರ್ಚಕರು, ದೇವಸ್ಥಾನದ ಸಿಬ್ಬಂದಿಗೆ ಮಾತ್ರ ಬೆಟ್ಟದಲ್ಲಿ ವಾಸಿಸಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು