News Karnataka Kannada
Friday, May 03 2024
ಮೈಸೂರು

ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ!

Ullal: Man commits suicide by pouring petrol
Photo Credit :

ಮೈಸೂರು: ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಆಲನಹಳ್ಳಿಯಲ್ಲಿ ನಡೆದಿದೆ.

ಕಿರಣ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಪ್ರಮೋದ್ ತಲೆಮರೆಸಿಕೊಂಡಿದ್ದು ಕೃತ್ಯಕ್ಕೆ ಸಹಕರಿಸಿದ ರಾಕೇಶ್ ಹಾಗೂ ಮಹೇಶ್ ರನ್ನ ಆಲನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೃತ ಕಿರಣ್ ತನ್ನ ವಿವಾಹ ವಾರ್ಷಿಕೋತ್ಸವ ದಿನ ಮಧ್ಯಪಾನ ಮಾಡಲು ಕಿರಣ್ ಆಲನಹಳ್ಳಿಯ ಬಾರ್ ಅಂಡ್ ರೆಸ್ಟೋರೆಂಟ್ ಗೆ ತೆರಳಿದ್ದ.

ಈ ವೇಳೆ ಆತನ ಚಿಕ್ಕಪ್ಪನ ಮಗ ಪ್ರಮೋದ್ ಹಾಗೂ ಸ್ನೇಹಿತರಾದ ಕಿರಣ್ ರಾಕೇಶ್ ಮಹೇಶ್ ಕೂಡ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಕಿರಣ್ ಸಹ ಅವರ ಟೇಬಲ್ ಸೇರಿಕೊಂಡ. ಈ ವೇಳೆ ಆಸ್ತಿ ವಿಚಾರ ಪ್ರಸ್ತಾಪವಾಗಿ ಜಗಳ ಶುರುವಾಗಿದೆ.

ಈ ವೇಳೆ ಕಿರಣ್ ಗೆ ಚಾಕುವಿನಿಂದ ಇರಿದ ಪ್ರಮೋದ್ ಪರಾರಿಯಾಗಿದ್ದಾನೆ.ತೀವ್ರ ಗಾಯಗೊಂಡ ಕಿರಣ್ ನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಮೃತಪಟ್ಟಿದ್ದಾನೆ. ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಾಕೇಶ್ ಹಾಗೂ ಮಹೇಶ್ ಇಬ್ಬರನ್ನೂ ಬಂಧಿಸಿದ್ದಾರೆ. ಪ್ರಮೋದ್ ಬಂಧನಕ್ಕೆ ಜಾಲ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು