Categories: ಮೈಸೂರು

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ : ಸಚಿವ ಮುರುಗೇಶ್ ನಿರಾಣಿ

ಮೈಸೂರು:ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಎಂಬುದು ಕೇವಲ ಊಹಪೋಹಷ್ಟೇ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಈ ಬಗ್ಗೆ ರಾಷ್ಟಿçÃಯ ನಾಯಕರು ಸ್ಪಷ್ಟಪಡಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನ ಪಡೆದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಅದರಲ್ಲಿ ನಮ್ಮ ಪಾತ್ರ ಇಲ್ಲ ಎಂದರು. ಇದೇ ವೇಳೆ ರಾಜ್ಯದಲ್ಲಿ ಪಂಚಮಸಾಲಿಯ ಮೂರನೇ ಪೀಠ ಸ್ಥಾಪನೆಯನ್ನ ಸಮರ್ಥಿಸಿಕೊಂಡ ಅವರು, ಎರಡು ಪೀಠಗಳ ಸ್ವಾಮೀಜಿಗಳ ಒತ್ತಡ ಕಡಿಮೆ ಮಾಡಲು ಈ ಪೀಠದ ಅಗತ್ಯ ಇದೆ. ಆದರೆ ಈ ಪೀಠದ ಸ್ಥಾಪನೆ ಹಿಂದೆ ನಾನಿಲ್ಲ. ಆದರೆ ನನ್ನ ಸಂಪೂರ್ಣ ಬೆಂಬಲ ಇದಕ್ಕೆ ಇದೆ ಎಂದರು.

ಶ್ರೀ ವಚನಾನಂದ ಸ್ವಾಮೀಜಿ ಸೇರಿ ಹಲವರು ಇದರ ಬೆಂಬಲಕ್ಕೆ ಇದ್ದಾರೆ. ಪೀಠ ಸ್ಥಾಪನೆಯ ಹಿಂದೆ ದುರುದ್ದೇಶದ ಪ್ರಶ್ನೆಯೇ ಇಲ್ಲ. ಸಮುದಾಯದ ಜನಸಂಖ್ಯೆ ಹೆಚ್ಚಿರುವ ಕಾರಣ ಮೂರನೇ ಪೀಠ ಅವಶ್ಯಕತೆ ಇದೆ. ಧಾರ್ಮಿಕ ಕಾರ್ಯಕ್ರಮ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಮೂರನೇ ಪೀಠ ಸ್ಥಾಪನೆ ಮಾಡಲಾಗಿದೆ.

ಪೀಠ ಸ್ಥಾಪನೆಯ ಯಾವುದೇ ಸಭೆ ಸಮಾರಂಭಕ್ಕೆ ನಾನು ಹೋಗಿಲ್ಲ ಎಂದು ಹೇಳಿದರು.ಮೂರನೇ ಪೀಠದ ಸ್ಥಾಪನೆ ವಿವಾದ ಸಂಬAಧ ಈ ಬಗ್ಗೆ ನಾನೇ ಖುದ್ದಾಗಿ ಸ್ವಾಮೀಜಿಯನ್ನು ಭೇಟಿ ಮಾಡುವುದಿಲ್ಲ. ಅವರು ಕರೆದರೆ ನಾನು ಹೋಗಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಮಠಕ್ಕೆ ಕೊಟ್ಟಿರುವ ಕಾಣಿಕೆ ವಾಪಸ್ಸು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಕಾಣಿಕೆಯನ್ನು ಸ್ವಾಮೀಜಿಗೆ ಕೊಟ್ಟಿಲ್ಲ. ನಾನು ಕೊಟ್ಟಿರುವುದು ಪೀಠಕ್ಕೆ. ಅದುನ್ನು ವಾಪಸ್ಸು ಕೇಳುವಷ್ಟು ಸಣ್ಣವನು ನಾನಲ್ಲ. ಇಂತಹ ಮನಸ್ಥಿತಿ ನನಗೆ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು. ಅದೇ ರೀತಿ ನಾನು ಪೀಠಕ್ಕೆ ನನ್ನ ಕೈಲಾದದನ್ನು ನೀಡಿದ್ದೇನೆ. ನಾನು ವಾಪಸ್ಸು ಕೇಳಿದ್ದೇನೆ ಎಂಬುದು ಸುಳ್ಳು. ಸ್ವಾಮೀಜಿಗೆ ಯಾರೋ ತಪುö್ಪ ಮಾಹಿತಿ ನೀಡಿದ್ದಾರೆ. ದೂರವಾಣಿ ಮೂಲಕ ಮಾತನಾಡಿದರೂ ನಾನು ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.

ನಿರಾಣಿ ಸಹೋದರ ಧಮ್ಮಿ ಹಾಕಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಆರೋಪ. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆಗೆ ತೋರಿಸುವ ಗಾಂಧಿ ತತ್ವ ನಮ್ಮ ಮನೆಯ ಸಂಸ್ಕಾರ. ಇದರಲ್ಲಿ ಧಮ್ಕಿ ಹಾಕು ಪ್ರಶ್ನೆಯೇ ಇಲ್ಲ ಎಂದರು.

Sneha Gowda

Recent Posts

ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ,…

16 mins ago

ರಾಜ್ಯಪಾಲ ಆನಂದ್ ಬೋಸ್ ವಿರುದ್ಧ ಲೈಂಗಿಕ ಆರೋಪ : ತನಿಖೆಗೆ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಈಗಾಗಲೇ ಬಾರಿ ಸದ್ದು…

20 mins ago

ವಿದೇಶದಲ್ಲಿರುವ ಪ್ರಜ್ವಲ್​ನನ್ನು ಕರೆತರಲು ಸಿದ್ದರಾಮಯ್ಯಗೆ ಮಾರ್ಗಸೂಚಿ ನೀಡಿದ ಅಣ್ಣಾಮಲೈ

ಪ್ರಜ್ವಲ್​ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ…

28 mins ago

ಸಂತ್ರಸ್ತೆ ಅಪಹರಣ ಕೇಸ್‌ : ಭವಾನಿ ರೇವಣ್ಣ ಸಂಬಂಧಿ ಬಂಧನ

ಈಗಾಗಲೇ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಬಾರಿ ಸದ್ದು ಮಾಡುತ್ತಿದೆ. ಅಲ್ಲದೇ ಅವರ ತಂದೆ ಸಚಿವ ಹೆಚ್​ಡಿ…

41 mins ago

ಭಾರೀ ಮಳೆ: ಮಣ್ಣಿನ ಕುಸಿತದಿಂದ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ.…

52 mins ago

ಆಫ್ರಿಕಾದಲ್ಲಿ ಮಳೆಯಿಂದ ಬಾರಿ ಪ್ರವಾಹ : 350ಕ್ಕೂ ಹೆಚ್ಚು ಸಾವು, 90 ಜನರು ನಾಪತ್ತೆ

ಕೀನ್ಯಾ ಮತ್ತು ತಂಜಾನಿಯಾದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಯಂತಾಗಿವೆ. ಮನೆಯಲ್ಲಿ ನಗುಗ್ಗಿದ ನೀರು ಮನೆ…

1 hour ago