ಚನ್ನಪಟ್ಟಣ, ; ಅತ್ಯಾಚಾರದಂತಹ ಕೃತ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ವೆಸಗಿದ ಕೃತ್ಯಕ್ಕೆ ಸಂಬಂಧಿಸಿದಂತೆ ಅಲ್ಲಿ ಕೈಗೊಂಡ ಕ್ರಮವನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಸೂಕ್ಷ್ಮವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದಿರುವ ಅತ್ಯಾಚಾರ ಅಮಾನವೀಯ ಮತ್ತು ಅನಾಗರಿಕ ಘಟನೆಯಾಗಿದ್ದು, ಇದು ನಡೆಯಬಾರದಿತ್ತು. ಸರ್ಕಾರದ ಹಾಗೂ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಅಮಾಯಕರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ನಿರ್ಜನ ಪ್ರದೇಶದಲ್ಲಿ ಸಾರ್ವಜನಿಕವಾಗಿ ಸ್ವೇಚ್ಛಚಾರದಿಂದ ಮದ್ಯ ಸೇವನೆ ಮಾಡಲು ಬಿಟ್ಟಿರುವುದು ಸರ್ಕಾರದ ತಪ್ಪು. ಸ್ವೇಚ್ಛಚಾರದಿಂದ ಮದ್ಯ ಸೇವನೆ ಮಾಡಿದವರು ಮೈಮೇಲೆ ಪ್ರಜ್ಞೆಯಿಲ್ಲದೆ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡು ಇಂತಹ ಕೃತ್ಯ ಎಸಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ನಿಲ್ಲುವವರೆಗೂ ದಕ್ಷಣೆ ಹೆಚ್ಚಾಗುವುದಿಲ್ಲ. ಸರ್ಕಾರದ ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಹೇಳಿದಂತ ಮಧ್ಯರಾತ್ರಿ ಮಹಿಳೆಯರು ನಿರ್ಭಯವಾಗಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ಹೇಳಿದರು.
ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…