ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.
ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸಚಿವರು ಪತ್ರಕತ೯ರೊಂದಿಗೆ ಮಾತನಾಡಿದರು.
‘ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವೆ’ ಎಂದು ತಿಳಿಸಿದರು.
‘ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸೋಮಶೇಖರ್ ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…
ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿ ರಸ್ತೆಯ…
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…