ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ಬಂದ್ ಆಗಿರುವ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ, ಇದೊಂದರಲ್ಲಿ ಅವರು ಸಕ್ರಿಯವಾಗಿದ್ದರು. ಈಗ ಇದೂ ಕೂಡ ಇಲ್ಲದಂತಾಗಿದೆ . ಟ್ವಿಟರ್ ಸಹ ರಾಹುಲ್ ಅವರಿಗೆ ಹೊರಹೋಗಲು ಬಾಗಿಲು ತೋರಿಸಿದೆ ಎಂದು ಪರಿಹಾಸ್ಯ ಮಾಡಿದೆ.
ಬಿಜೆಪಿ ಸಂಸದ ಮತ್ತು ಪಕ್ಷದ ಯುವ ಘಟದ ಮಖ್ಯಸ್ಥ ತೇಜಸ್ವಿ ಸೂರ್ಯ, ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇವರ ಟ್ವಿಟರ್ ಪೋಸ್ಟ್ಗಳು ಅಸಭ್ಯ, ಅಕ್ರಮ ಮತ್ತು ಅಮಾನವೀಯ ಎಂದು ಟೀಕಿಸಿದ್ದಾರೆ.ರಾಹುಲ್ ಟ್ವೀಟರ್ನಲ್ಲಿ ಮಾತ್ರ ಸಕ್ರಿಯವಾಗಿದ್ದರು. ದುರದೃಷ್ಟವಶಾತ್ ಈಗ ಅದೂ ಕೂಡ ರಾಹುಲ್ ಹೊರ ನಡೆಯಲು ದಾರಿ ತೋರಿಸಿದೆ ಎಂದು ಪರಿಹಾಸ್ಯ ಮಾಡಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಜೊತೆಗಿನ ಫೋಟೋದೊಂದಿಗೆ ರಾಹುಲ್ ಗಾಂಧಿ ಇತ್ತೀಚೆಗೆ ಮಾಡಿದ್ದ ಪೋಸ್ಟ್ನನ್ನು ಟ್ವಟಿರ್ ತನ್ನ ಅಂಕಣದಿಂದ ತೆಗೆದುಹಾಕಿ ನಂತರ ಅವರ ಖಾತೆಯನ್ನೂ ಸ್ಥಗಿತಗೊಳಿಸಿತ್ತು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…