News Karnataka Kannada
Tuesday, April 30 2024
ಮೈಸೂರು

ರೈತನ ಮಗಳಿಗೆ ಕೃಷಿ ಖಾತೆ ನೀಡಿದ ಪ್ರಧಾನಿ ; ಸಚಿವೆ ಶೋಭಾ ಕರಂದ್ಲಾಜೆ

Shobhakarandlaje Udupi 110072021
Photo Credit :

ಮೈಸೂರು: ಪ್ರಧಾನಿ ಮೋದಿ ದೇಶದ ರೈತನ ಮಗಳೊಬ್ಬಳಿಗೆ ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ. ಹಳ್ಳಿಯಲ್ಲಿ ನಾನು ಓದುವಾಗ ವಿದ್ಯುತ್‌ ಮತ್ತು ರಸ್ತೆ ಕೂಡ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಇಂತಹ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ಅವರು ಬೇರೆ ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.‘ರೈತರ ಮನವೊಲಿಸಬಹುದು. ಆದರೆ, ರೈತರಂತೆ ನಟಿಸುವವರ ಮನವೊಲಿಸಲು ಸಾಧ್ಯವಿಲ್ಲ. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವು ದಲ್ಲಾಳಿಗಳು ಹಾಗೂ ಮಧ್ಯವರ್ತಿಗಳ ಹೋರಾಟವಾಗಿದೆ’ ಎಂದು ಸಚಿವೆ ಶೋಭಾ ಟೀಕಿಸಿದರು.
‘11 ಸುತ್ತಿನ ಮಾತುಕತೆ ನಡೆದಿದ್ದು, ಯಾವುದೇ ವಿಚಾರ ಒಪ್ಪಿಕೊಳ್ಳದ ಮನಸ್ಥಿತಿ ರೈತ ಮುಖಂಡರದ್ದು. ಪಂಜಾಬ್‌ನಲ್ಲಿ ಎಪಿಎಂಸಿಯ ದೊಡ್ಡ ಲಾಬಿ ನಡೆಯುತ್ತಿದೆ. ರೈತರನ್ನು ವಂಚಿಸುತ್ತಿರುವ ಮಧ್ಯವರ್ತಿಗಳು ಧರಣಿ ಕುಳಿದಿದ್ದಾರೆ. ಕಮಿಷನ್‌ ತಪ್ಪಿ ಹೋಗುವ ಆತಂಕ ಅವರನ್ನು ಕಾಡುತ್ತಿದೆ’ ಎಂದು ಆರೋಪಿಸಿದರು.
ಅತಿ ಹೆಚ್ಚು ಹಿಂದುಳಿದ ವರ್ಗದವರು, ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿದ್ದಾರೆ. ಕೃಷಿ ಇಲಾಖೆಯನ್ನು ಅಧ್ಯಯನ ಮಾಡಲು ಮೂರು ತಿಂಗಳ ಕಾಲಾವಕಾಶ ಅವಶ್ಯಕತೆ ಇದೆ. ಅದನ್ನು ಮಾಡಿ ತೋರಿಸುತ್ತೇನೆ. ಈ ಮೊದಲಿನ ಸರ್ಕಾರಗಳು ಕೃಷಿಯನ್ನು ಕಡೆಗಣಿಸಿದ್ದವು. ಆದರೆ ಮೋದಿ ಅವರು ಪ್ರಧಾನಿಯಾದ ಬಳಿಕ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಕೃಷಿಗೆ ಮೀಸಲಿಡಲಾಗಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ ರಫ್ತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾವು ಸಾಗುತ್ತಿದ್ದೇವೆ. ಕರೊನಾ ಲಾಕ್ ಡೌನ್ ಜಾರಿಯಲ್ಲಿದ್ದ ಸಮಯದಲ್ಲೂ ದಾಖಲೆ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹವಾಗಿದೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು