News Karnataka Kannada
Sunday, May 05 2024
ಮೈಸೂರು

ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ

Achivers (1)
Photo Credit : News Kannada

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಂಸ್ಥೆ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರಿನ ವಿಭಾಗೀಯ ವ್ಯವಸ್ಥಾಪಕರ ಕಛೇರಿಯ ಸಭಾಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪೂಜಾ ಅಗರ್ವಾಲ್ ಅವರು, 25 ವರ್ಷಗಳಿಗಿಂತ ಹೆಚ್ಚು ಸೇವೆಯನ್ನು ಪೂರ್ಣಗೊಳಿಸಿದ ಮತ್ತು ತಮ್ಮ ಕರ್ತವ್ಯದ ಅವಧಿಯಲ್ಲಿ ಆದರ್ಶಪ್ರಾಯ ಕೆಲಸ ಮಾಡಿದ ಮೈಸೂರು ವಿಭಾಗದ ವಿವಿಧ ಇಲಾಖೆಗಳ 35 ಪ್ರತಿಭಾನ್ವಿತ ಸಿಬ್ಬಂದಿಗಳನ್ನು ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಅವರು, ಸಂಸ್ಥೆಗೆ ಸಿಬ್ಬಂದಿಗಳು ಅತ್ಯಂತ ದೊಡ್ಡ ಆಸ್ತಿ. ಭಾರತೀಯ ರೈಲ್ವೆಯ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಶ್ಲಾಘಿಸಿದರಲ್ಲದೆ, ತಮ್ಮ ಉತ್ತಮ ಕೆಲಸವನ್ನು ಮುಂದುವರೆಸುವಂತೆ ಹೇಳಿದರು.

ಈ ವೇಳೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್, ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕರಾದ ಎ.ದೇವಸಹಾಯಂ, ಬುಡತಿ ಶ್ರೀನಿವಾಸುಲು, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಪ್ರಶಾಂತ್ ಮಾಸ್ತಿಹೊಳಿ, ಮಹಿಳಾ ಕಲ್ಯಾಣ ಸಂಸ್ಥೆಯ ಸದಸ್ಯರು ಹಾಗು ಮೈಸೂರು ವಿಭಾಗದ ಇತರೆ ಹಿರಿಯ ಅಧಿಕಾರಿಗಳು ಸಭಾಂಗಣದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು