ಮೈಸೂರು, ; ಇಂದು 9 ರಿಂದ 12 ನೇ ತರಗತಿ ವರೆಗಿನ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿದ್ದು, ನಗರದ ಸೇಂಟ್ ಮೆರೀಸ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶಾಲೆಯ ವ್ಯವಸ್ಥೆಯನ್ನು ಪರಿಶೀಲನೆಯನ್ನು ಶಾಸಕ ಎಸ್.ಎ. ರಾಮದಾಸ್ ಅವರು ನಡೆಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಪೆನ್ನು ಹಾಗೂ ಚಾಕಲೇಟ್ ನ್ನು ನೀಡುವ ಮೂಲಕ ಶಾಸಕರು ಶುಭ ಕೋರಿ ಧೈರ್ಯ ತುಂಬಿದರು. ಕೋವಿಡ್ ಕರಾಳ ಛಾಯೆಯ 2 ವರ್ಷಗಳ ನಂತರದಲ್ಲಿ ಶಾಲೆ ಮತ್ತೆ ಪ್ರಾರಂಭವಾಗುತ್ತಿದೆ. ಭಾರತ ದೇಶದ ಮುಂದಿನ ಭವಿಷ್ಯವನ್ನು ಬರೆಯುವಂತಹ ಮಕ್ಕಳಿಗೆ ವಂದನೆಗಳು. ಈಗಾಗಲೇ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಲಕ್ಷಾಂತರ ಜನರು ಪ್ರಾಣ ಬಿಟ್ಟಿರುವುದು ನೋವಿನ ಸಂಗತಿ.ಪರೀಕ್ಷೆಯ ಪದ್ಧತಿಯ ವ್ಯವಸ್ಥೆಯಲ್ಲಿ 10 ನೆ ತರಗತಿಯ ಪರೀಕ್ಷೆ ಮಾಡಲಾಯಿತು. ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಶಕ್ತಿಯನ್ನು ಅವಲೋಕನ ಮಾಡಿ ಪರೀಕ್ಷೆ ಮಾಡಿದೆವು. ಈ ಕೋವಿಡ್ ಸಂದರ್ಭದಲ್ಲಿಯೂ ಸಹ ಮಕ್ಕಳು ಕಲಿಕೆಯಲ್ಲಿ ಹಿಂದೆ ಬೀಳಲಿಲ್ಲ, ಕೊರೊನಾ ಸಂದರ್ಭದಲ್ಲಿಯೂ ಸಹ ನೀವು ನಿರಂತರ ಕಲಿಕೆಯಲ್ಲಿ ತೊಡಗಿದ್ದೀರಿ. 625 ಕ್ಕೆ 625 ಅಂಕಗಳನ್ನು ಮೈಸೂರಿನಲ್ಲಿ 9 ಜನ ಪಡೆದುಕೊಂಡಿದ್ದಾರೆ. ಅದರಲ್ಲಿ 5 ಜನರು ಕೆ.ಆರ್ ಕ್ಷೇತ್ರದವರು ಎನ್ನಲು ಸಂತೋಷವಾಗುತ್ತಿದೆ. ನಾನು ಬಂದಾಗ ಮಕ್ಕಳ ಮುಖದಲ್ಲಿ ಸಂತೋಷವನ್ನು ನೋಡಿ ನನಗೆ ತೃಪ್ತಿ ಆಯಿತು. ನಮ್ಮ ಕ್ಷೇತ್ರದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 270 ಬೂತ್ ಗಳಲ್ಲೂ ಕೂಡಾ ವ್ಯಾಕ್ಸಿನೇಷನ್ ಮಾಡಿಸಿದ್ದೇವೆ. 2.19 ಲಕ್ಷ ಜನಕ್ಕೆ ಈಗಾಗಲೇ ಕೋವಿಡ್ ಲಸಿಕೆಯನ್ನು ಕೆ.ಆರ್ ಕ್ಷೇತ್ರದಲ್ಲಿ ನೀಡಲಾಗಿದೆ. ನೀವು ಧೈರ್ಯದಿಂದ ಶಾಲೆಗೆ ಬಂದಿದ್ದೀರಿ ನಿಮಗೆಲ್ಲರಿಗೂ ಸ್ವಾಗತ ಎಂದರು. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ಬಳಸಿ ಇದು ಕೊರೊನಾ ವಿರುದ್ಧದ ಮೊದಲ ಅಸ್ತ್ರವಾಗಿದೆ. ಪ್ರತಿ ತಿಂಗಳು ಒಂದು ದಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಶಾಲೆಗೆ ಬಂದು ನಿಮ್ಮ ಆರೋಗ್ಯ ತಪಾಸಣೆ ಮಾಡಲಿದ್ದಾರೆ, ನೀವು ಭಯ ಪಡಬೇಕಾಗಿಲ್ಲ. ನೀವೆಲ್ಲರೂ ಶೈಕ್ಷಣಿಕ ವರ್ಷದಲ್ಲಿ ಒಳ್ಳೆಯ ಸಾಧನೆ ಮಾಡಿ ಎಂದು ಹಾರೈಸಿದರು. ನಿಮ್ಮ ರಕ್ಷಣೆ ನಮ್ಮೆಲ್ಲರ ಮೊದಲ ಆದ್ಯತೆ ಆಗಿದೆ ಎಂದರು.
ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಶಾಸಕ ಎಸ್.ಎ. ರಾಮದಾಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.