ಮೈಸೂರು : ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈನಲ್ಲಿ, ಸುತ್ತೂರಲ್ಲಿ ಅಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಸುತ್ತೂರು ಮಠದ ಸ್ವಾಮೀಜಿಯನ್ನು ಭೇಟಿಯಾಗಲು ಬೆಳಗಾವಿಯಿಂದ ಅವರು ಬರುತ್ತಿದ್ದ ನಡುವೆಯೇ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಶುರುವಾಗಿತ್ತು. ಸಚಿವ ಸ್ಥಾನಕ್ಕಾಗಿ ಅವರು ಬರುತ್ತಿದ್ದಾರೆ ಎಂದು ಸುದ್ದಿ ಹರಡಿತ್ತು.
ಈ ಸುದ್ದಿಗೆ ತೆರೆ ಎಳೆಯಲು ಪ್ರಯತ್ನಿಸಿದ ಜಾರಕಿಹೊಳಿ, ಸುತ್ತೂರು ಮಠಕ್ಕೆ ಬಂದಿರೋದು ಸ್ವಾಮೀಜಿ ಅವರನ್ನು ಭೇಟಿ ಮಾಡಲು ಅಷ್ಟೇ. ಇಲ್ಲಿ ಬಂದಿರುವ ಹಿಂದೆ ರಾಜಕೀಯ ಉದ್ದೇಶವಿಲ್ಲ. ಸ್ವಾಮೀಜಿ ಅವರ ತಾಯಿ ಮೃತಪಟ್ಟ ಕಾರಣ ಇಲ್ಲಿಗೆ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.