ಬೆಂಗಳೂರು ; ಪ್ರತಿಭಟನಾ ನಿರತ ರೈತರ ಬಗ್ಗೆ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಮಾಜಿ ಶಾಸಕ ಕೋನರೆಡ್ಡಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಸರಿಯಾಗಿದ್ದರೆ ರೈತರಿಗೆ ಮನವರಿಕೆ ಮಾಡಿಕೊಡಬೇಕು, ಹೋರಾಟ ನಿರತ ರೈತರನ್ನು ದಲ್ಲಾಳಿಗಳು ಎಂದು ಕರೆದಿರುವುದು ಸರಿಯಲ್ಲ. ಇದು ಖಂಡನೀಯ ಎಂದರು.ಪ್ರತಿಭಟನಾ ನಿರತ ರೈತರೊಂದಿಗೆ ಸಮಾಲೋಚನೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಕೋನರೆಡ್ಡಿ ಮಾತನಾಡಿ, ದೇಶಾದ್ಯಂತ ರೈತ ವಿರೋಧಿ ಕಾನೂನಿನ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಕೇಂದ್ರದ ಕೃಷಿ ಸಚಿವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನಾರ್ಹ. ಇಂತಹ ಹೇಳಿಕೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಕೂಡಲೇ ಅವರು ರೈತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಶೋಭಾ ಕರಂದ್ಲಾಜೆ ರೈತರ ಕ್ಷಮೆಯಾಚಿಸಲಿ ; ಮಾಜಿ ಸಚಿವ ಸಾ ರಾ ಮಹೇಶ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.