ಮೈಸೂರು, ನ. 28 ; ಆಸ್ತಿಗಾಗಿ ಜನರು ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಸತ್ತು ಮಲಗಿರುವ ವೃದ್ಧೆಯಿಂದ ಆಸ್ತಿಗಾಗಿ ಖಾಲಿ ಪತ್ರಕ್ಕೆ ಹೆಬ್ಬೆಟ್ಟು ಒತ್ತಿಸಿಕೊಳ್ಳಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈಸೂರಿನ ಶ್ರೀರಾಂಪುರದಲ್ಲಿ ಹನ್ನೊಂದು ದಿನಗಳ ಹಿಂದೆ ಜಯಮ್ಮ (73) ಎಂಬ ವೃದ್ದೆ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿದ್ದರು.
ಅವರು ಬದುಕಿದ್ದಾಗ ಯಾರೂ ಸರಿಯಾಗಿ ನೋಡಿಕೊಳ್ಳಲಿಲ್ಲ. ಆದರೆ ಸತ್ತಾಗ ಆಸ್ತಿಯಲ್ಲಿ ಪಾಲು ಪಡೆಯಲು ಕಿತ್ತಾಟ ನಡೆದಿದೆ.
ಜಯಮ್ಮನ ಕುಟುಂಬಕ್ಕೆ ಪಿರ್ತಾರ್ಜಿತವಾಗಿ 14 ಎಕರೆ ಆಸ್ತಿ ಇತ್ತು. ಮದುವೆಯಾದ ಹೊಸದರಲ್ಲೇ ಪತಿಯಿಂದ ದೂರವಾಗಿದ್ದ ಜಯಮ್ಮ ಆಸ್ತಿಯಲ್ಲಿ ಪಾಲು ಪಡೆಯಲು ಪತಿಯೂ ಬದುಕಿಲ್ಲ, ಮಕ್ಕಳೂ ಇಲ್ಲ.
ಜಯಮ್ಮನ ಪಾಲಿನ ಪಿತ್ರಾರ್ಜಿತ ಆಸ್ತಿಗಾಗಿ ತವರು ಮನೆಯಲ್ಲಿ ಉಂಟಾದ ಗೊಂದಲ ಈಗ ಬಯಲಿಗೆ ಬಂದಿದೆ. ಜಯಮ್ಮನಿಗೆ ಇಬ್ಬರು ಅಕ್ಕಂದಿರು, ಒಬ್ಬ ತಮ್ಮ ಇದ್ದಾರೆ.
ಜಯಮ್ಮ ಸತ್ತು ಮಲಗಿದಾಗ ಅಕ್ಕನ ಮಗ ಆಸ್ತಿಗಾಗಿ ಬಾಂಡ್ ಪೇಪರ್ ಮೇಲೆ ಶವದ ಹೆಬ್ಬೆಟ್ಟು ಒತ್ತಿಸಿಕೊಂಡಿದ್ದಾರೆ. ಖಾಲಿ ಪೇಪರ್ ಮೇಲೆ ಹೆಬ್ಬೆಟ್ಟು ಒತ್ತಿಸಿಕೊಳ್ಳುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…