ತಿ.ನರಸೀಪುರ: ತಮ್ಮನಿಗೆ ಹುಟ್ಟು ಹಬ್ಬದ ಸಿಹಿ ವಿತರಿಸಿ, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಮರ ಬಿದ್ದ ಪರಿಣಾಮ ಆತ ಮೃತ ಪಟ್ಟಿರುವ ಘಟನೆ ತಾಲೂಕಿನ ಹಳೇ ಕೆಂಪಯ್ಯನ ಹುಂಡಿ ಗ್ರಾಮದ ಬಳಿ ಸಂಭವಿಸಿದೆ.
ತಾಲೂಕಿನ ಮೂಗೂರು ಗ್ರಾಮದ ನಿವಾಸಿ ಮನು(೨೮) ಎಂಬಾತನೇ ಮರದ ಕೊಂಬೆ ಬಿದ್ದು ದುರಂತ ಸಾವಿಗೀಡಾದ ಯುವಕ. ಈತ ಸೋಮವಾರ ತನ್ನ ಹುಟ್ಟುಹಬ್ಬದ ನಿಮಿತ್ತ ಮೈಸೂರಿನಲ್ಲಿರುವ ತಮ್ಮನ ಮನೆಗೆ ಹೋಗಿ, ಸಿಹಿ ವಿತರಿಸಿ ಮೂಗೂರಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ನಟ ದರ್ಶನ್ ತೋಟದ ಬಳಿ ಮರವೊಂದು ಬೈಕ್ನಲ್ಲಿ ಬರುತ್ತಿದ್ದ ಮನು ತಲೆ ಮೇಲೆ ಬಿದ್ದಿದೆ.
ಮರ ತಲೆಯ ಮೇಲೆ ಬಿದ್ದ ಹಿನ್ನೆಲೆಯಲ್ಲಿ ಮನುವಿಗೆ ತೀವ್ರವಾದ ಗಾಯಗಳಾಗಿ ಆತ ಸ್ಥಳದಲ್ಲೇ ಮೃತಪಟ್ಟನೆಂದು ತಿಳಿದುಬಂದಿದೆ. ಸ್ಥಳಕ್ಕೆ ಪಟ್ಟಣ ಠಾಣೆಯ ಸಿಪಿಐ ಕೃಷ್ಣಪ್ಪ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.ಮನುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಯ 85 ಫ್ಲೈಟ್ಗಳು ರದ್ದಾಗಿವೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…
ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…
ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…
ಚಿಕನ್ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…
ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…