ಹುಣಸೂರು: ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.